ನವದೆಹಲಿ: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್ ಭಾಯ್ʼ ಎಂದು ಬರೆದ ಕಪ್ಪು ಮಾಸ್ಕ್ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್ ಆವರಣದ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದು ಭಾಗವಹಿಸಿದರು. ಜೊತೆಯಲ್ಲಿ ʼಇಂಡಿಯಾʼ ಮೈತ್ರಿಕೂಟದ ಪಕ್ಷಗಳಾದ ಆರ್ಜೆಡಿ, ಜೆಎಂಎಂ ಸಂಸದರು ಕೂಡ ಪಾಲ್ಗೊಂಡಿದ್ದರು. ಆದರೆ ಟಿಎಂಸಿ ಹಾಗೂ ಸಮಾಜವಾದಿ ಪಕ್ಷದ ಸದಸ್ಯರು ಪ್ರತಿಭಟನೆಯಿಂದ ದೂರವುಳಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೌತಮ್ ಅದಾನಿ ತುಂಬಾ ಹತ್ತಿರದ ಸ್ನೇಹಿತರು. ಗೌತಮ್ ಅದಾನಿ ಶ್ರೀಮಂತರ ಪಟ್ಟಯಲ್ಲಿ ಸ್ಥಾನಗಳಿಸುವಲ್ಲಿ ಮೋದಿಯವರ ಪಾತ್ರ ಇದೆ ಎಂದು ಗಂಭೀರ ಆರೋಪ ಮಾಡಿದರು.
ನಂತರ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ನಲ್ಲಿ ಚರ್ಚಿಸಲು ಪ್ರಧಾನಿ ಮೋದಿ ಅವರು ಭಯಪಡುತ್ತಾರೆ ಎಂದು ಕಿಡಿಕಾರಿದರು. ಅಮೇರಿಕಾದಲ್ಲಿ ಅದಾನಿ ಮೇಲೆ ಆಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…