ನವದೆಹಲಿ: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ʼಮೋದಿ-ಅದಾನಿ ಭಾಯ್ ಭಾಯ್ʼ ಎಂದು ಬರೆದ ಕಪ್ಪು ಮಾಸ್ಕ್ ಧರಿಸಿ ಇಂದು ಸಹ ವಿರೋಧ ಪಕ್ಷದ ನಾಯಕರು ಸಂಸತ್ ಆವರಣದ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದು ಭಾಗವಹಿಸಿದರು. ಜೊತೆಯಲ್ಲಿ ʼಇಂಡಿಯಾʼ ಮೈತ್ರಿಕೂಟದ ಪಕ್ಷಗಳಾದ ಆರ್ಜೆಡಿ, ಜೆಎಂಎಂ ಸಂಸದರು ಕೂಡ ಪಾಲ್ಗೊಂಡಿದ್ದರು. ಆದರೆ ಟಿಎಂಸಿ ಹಾಗೂ ಸಮಾಜವಾದಿ ಪಕ್ಷದ ಸದಸ್ಯರು ಪ್ರತಿಭಟನೆಯಿಂದ ದೂರವುಳಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೌತಮ್ ಅದಾನಿ ತುಂಬಾ ಹತ್ತಿರದ ಸ್ನೇಹಿತರು. ಗೌತಮ್ ಅದಾನಿ ಶ್ರೀಮಂತರ ಪಟ್ಟಯಲ್ಲಿ ಸ್ಥಾನಗಳಿಸುವಲ್ಲಿ ಮೋದಿಯವರ ಪಾತ್ರ ಇದೆ ಎಂದು ಗಂಭೀರ ಆರೋಪ ಮಾಡಿದರು.
ನಂತರ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ನಲ್ಲಿ ಚರ್ಚಿಸಲು ಪ್ರಧಾನಿ ಮೋದಿ ಅವರು ಭಯಪಡುತ್ತಾರೆ ಎಂದು ಕಿಡಿಕಾರಿದರು. ಅಮೇರಿಕಾದಲ್ಲಿ ಅದಾನಿ ಮೇಲೆ ಆಗಿರುವ ಆರೋಪಗಳಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…