ಹೈದರಾಬಾದ್ : ಮನೆಯವರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ತೆಲಂಗಾಣದ ಗಡ್ಕೇಸರ್ ಜನ್ನಾಪುರ ಬಳಿ ಜರುಗಿದೆ.
ಪರ್ವತರಂ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಗೊಂಡ ಜಿಲ್ಲೆಯ ಜೆಬಿ ನಗರದ ನಿವಾಸಿ ಶ್ರೀರಾಮ್ ಸರಪಲ್ಲಿಯಲ್ಲಿ ಸೈಕಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಅಂಗಡಿಗೆ ಆಗಾಗ್ಗೆ ಹೋಗಿ ಬರುತ್ತಿದ್ದಾಗ ಅಪ್ರಾಪ್ತ ಬಾಲಕಿಯ ಪರಿಚಯವಾಗಿ, ಪರಿಚಯ ಬಳಿಕ ಸ್ನೇಹ ಪ್ರೀತಿಗೆ ತಿರುಗಿತ್ತು.
ಇವರಿಬ್ಬರ ಪ್ರೀತಿಯ ವಿಷಯ ಮನೆಯವರಿಗೆ ಗೊತ್ತಾಗಿದೆ. ಹುಡುಗಿ ಅಪ್ರಾಪ್ತ ಬಾಲಕಿಯಾಗಿದ್ದರಿಂದ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಸ್ನೇಹಿತರು ಈ ನಡುವೆ ಇವರಿಬ್ಬರಿಗೂ ಮದುವೆ ಮಾಡಿಸಲು ಲಕ್ಷಾಂತರ ಹಣವನ್ನು ಕೂಡ ಸಂಗ್ರಹಿಸಿದ್ದರು ಎನ್ನಲಾಗಿದೆ.
ಕೊನೆಯದಾಗಿ ಎರಡು ಕುಟುಂಬದವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ತಾವು ಒಂದಾಗಲು ಸಾಧ್ಯವಿಲ್ಲವೆಂದು ನೊಂದು ಪ್ರೇಮಿಗಳು ಆತಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, ಬಳಿಕ ಡೆತ್ನೋಟ್ ಬರೆದಿಟ್ಟು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ.
ನಡುರಸ್ತೆಯಲ್ಲಿ ಕಾರು ಹೊತ್ತಿ ಉರಿಯುತ್ತಿದ್ದದ್ದನ್ನು ನೋಡಿ ಸಮೀಪವೇ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರು ಬಕೆಟ್ಗಳಲ್ಲಿ ನೀರು ತಂದು ಬೆಂಕಿ ಆರಿಸಲು ಕೂಡ ಪ್ರಯತ್ನಿಸಿದರಾದರೂ ಬೆಂಕಿ ಜ್ವಾಲೆ ಹೆಚ್ಚಾಗಿದ್ದರಿಂದ ಅದು ವಿಫಲವಾಗಿದೆ. ಈ ಮಧ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿಯನ್ನು ನಂದಿಸುವಷ್ಟರಲ್ಲಿ ಪ್ರೇಮಿಗಳು ಸಜೀವ ದಹನವಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…