ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ ʼಎಲ್ಲೆಡೆ ಹಿಂದಿ-ಎಲ್ಲವೂ ಹಿಂದಿʼ ಎಂಬ ತನ್ನ ನೀತಿಯನ್ನು ಹೇರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು, ಹಿಂದಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಹಿಂದಿ ವಿರುದ್ಧ ಅವಹೇಳನ, ಆಕ್ಷೇಪಗಳಿಗೆ ಕ್ಷಮೆಯಿದೆ. ರಾಜ್ಯಾದ್ಯಂತ ಹಿಂದಿ ಕಲಿಕೆ ಕುರಿತು ಹೆಚ್ಚು ಆಸಕ್ತಿ ಹೊಂದುತ್ತಿರುವುದನ್ನು ಕಂಡಿದ್ದೇನೆ ಎಂದು ಹೇಳಿಕೆ ನೀಡಿದ್ದರು. ರಾಜ್ಯಪಾಲರ ಈ ಹೇಳಿಕೆಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಂ.ಕೆ.ಸ್ಟಾಲಿನ್ ಅವರು, ಹಿಂದಿ ಭಾಷೆಯು ಪ್ರಧಾನ ಆಡು ಭಾಷೆಯಾಗಿದ್ದು, ಹಿಂದಿ ಮಾತನಾಡದಿರುವ ರಾಜ್ಯದಲ್ಲಿ ಹಿಂದಿ ಮಾಸಾಚರಣೆ ಕಾರ್ಯಕ್ರಮಗಳು ಸರಿಯಲ್ಲ. ಅಲ್ಲದೇ, ಇಂತಹ ಆಚರಣೆಗಳು ಪ್ರಾದೇಶಿಕ ಭಾಷೆಗಳನ್ನು ತುಳಿಯಲು ಮಾಡಲಾಗಿರುವ ಸಂಚು ಎಂಬುದು ಸ್ಪಷ್ಟವಾಗುತ್ತದೆ. ಹೀಗಾಗಿ ನಾನು ರಾಜ್ಯಪಾಲರ ಭಾಷಣವನ್ನು ಖಂಡಿಸುತ್ತೇನೆ. ಈ ಬಗ್ಗೆ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಗಮನಹರಿಸಬೇಕು ಎಂದು ಪೋಸ್ಟ್ ಮಾಡಿದ್ದಾರೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…