ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ ʼಎಲ್ಲೆಡೆ ಹಿಂದಿ-ಎಲ್ಲವೂ ಹಿಂದಿʼ ಎಂಬ ತನ್ನ ನೀತಿಯನ್ನು ಹೇರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು, ಹಿಂದಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಹಿಂದಿ ವಿರುದ್ಧ ಅವಹೇಳನ, ಆಕ್ಷೇಪಗಳಿಗೆ ಕ್ಷಮೆಯಿದೆ. ರಾಜ್ಯಾದ್ಯಂತ ಹಿಂದಿ ಕಲಿಕೆ ಕುರಿತು ಹೆಚ್ಚು ಆಸಕ್ತಿ ಹೊಂದುತ್ತಿರುವುದನ್ನು ಕಂಡಿದ್ದೇನೆ ಎಂದು ಹೇಳಿಕೆ ನೀಡಿದ್ದರು. ರಾಜ್ಯಪಾಲರ ಈ ಹೇಳಿಕೆಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಂ.ಕೆ.ಸ್ಟಾಲಿನ್ ಅವರು, ಹಿಂದಿ ಭಾಷೆಯು ಪ್ರಧಾನ ಆಡು ಭಾಷೆಯಾಗಿದ್ದು, ಹಿಂದಿ ಮಾತನಾಡದಿರುವ ರಾಜ್ಯದಲ್ಲಿ ಹಿಂದಿ ಮಾಸಾಚರಣೆ ಕಾರ್ಯಕ್ರಮಗಳು ಸರಿಯಲ್ಲ. ಅಲ್ಲದೇ, ಇಂತಹ ಆಚರಣೆಗಳು ಪ್ರಾದೇಶಿಕ ಭಾಷೆಗಳನ್ನು ತುಳಿಯಲು ಮಾಡಲಾಗಿರುವ ಸಂಚು ಎಂಬುದು ಸ್ಪಷ್ಟವಾಗುತ್ತದೆ. ಹೀಗಾಗಿ ನಾನು ರಾಜ್ಯಪಾಲರ ಭಾಷಣವನ್ನು ಖಂಡಿಸುತ್ತೇನೆ. ಈ ಬಗ್ಗೆ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಗಮನಹರಿಸಬೇಕು ಎಂದು ಪೋಸ್ಟ್ ಮಾಡಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…