ದೇಶ- ವಿದೇಶ

ರಾಜ್ಯದಲ್ಲಿ ಹಿಂದಿ ಹೇರಿಕೆ: ತಮಿಳುನಾಡು ರಾಜ್ಯಪಾಲ ರವಿ ವಿರುದ್ಧ ಧ್ವನಿ ಎತ್ತಿದ ಎಂ.ಕೆ.ಸ್ಟಾಲಿನ್

ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ ʼಎಲ್ಲೆಡೆ ಹಿಂದಿ-ಎಲ್ಲವೂ ಹಿಂದಿʼ ಎಂಬ ತನ್ನ ನೀತಿಯನ್ನು ಹೇರಿಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಆರೋಪಿಸಿದ್ದಾರೆ.

ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ ಅವರು, ಹಿಂದಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಹಿಂದಿ ವಿರುದ್ಧ ಅವಹೇಳನ, ಆಕ್ಷೇಪಗಳಿಗೆ ಕ್ಷಮೆಯಿದೆ. ರಾಜ್ಯಾದ್ಯಂತ ಹಿಂದಿ ಕಲಿಕೆ ಕುರಿತು ಹೆಚ್ಚು ಆಸಕ್ತಿ ಹೊಂದುತ್ತಿರುವುದನ್ನು ಕಂಡಿದ್ದೇನೆ ಎಂದು ಹೇಳಿಕೆ ನೀಡಿದ್ದರು. ರಾಜ್ಯಪಾಲರ ಈ ಹೇಳಿಕೆಯ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಂ.ಕೆ.ಸ್ಟಾಲಿನ್‌ ಅವರು, ಹಿಂದಿ ಭಾಷೆಯು ಪ್ರಧಾನ ಆಡು ಭಾಷೆಯಾಗಿದ್ದು, ಹಿಂದಿ ಮಾತನಾಡದಿರುವ ರಾಜ್ಯದಲ್ಲಿ ಹಿಂದಿ ಮಾಸಾಚರಣೆ ಕಾರ್ಯಕ್ರಮಗಳು ಸರಿಯಲ್ಲ. ಅಲ್ಲದೇ, ಇಂತಹ ಆಚರಣೆಗಳು ಪ್ರಾದೇಶಿಕ ಭಾಷೆಗಳನ್ನು ತುಳಿಯಲು ಮಾಡಲಾಗಿರುವ ಸಂಚು ಎಂಬುದು ಸ್ಪಷ್ಟವಾಗುತ್ತದೆ. ಹೀಗಾಗಿ ನಾನು ರಾಜ್ಯಪಾಲರ ಭಾಷಣವನ್ನು ಖಂಡಿಸುತ್ತೇನೆ. ಈ ಬಗ್ಗೆ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಗಮನಹರಿಸಬೇಕು ಎಂದು ಪೋಸ್ಟ್‌ ಮಾಡಿದ್ದಾರೆ.

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago