ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಐಎಂಐಎಂನ ಅಧ್ಯಕ್ಷ ಹಾಗೂ ಸಂಸದ ಅಸಾದುದ್ಧೀನ್ ಓವೈಸಿ ಆರೋಪಿಸಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಬಗ್ಗೆ ಮಾತನಾಡಿದ ಅವರು, ಮುಸ್ಲಿಮರನ್ನು ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.
ದೇಶದಲ್ಲಿ ಮುಸ್ಲಿಮರು ಕಡು ಬಡವರಾಗಿದ್ದು, ಮುಸ್ಲಿಂ ಸಮುದಾಯದ ಮಹಿಳೆಯರು ಕೂಡ ಸಾಕಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಹಿಂದಿನಿಂದಲೂ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನವಂತೂ ಹೆಚ್ಚಳ ಕಂಡಿಲ್ಲ. ಹಜ್ ಸಮಿತಿಯು ಭ್ರಷ್ಟಾಚಾರ ಕೇಂದ್ರವಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಇನ್ನಾದರೂ ಮುಸ್ಲಿಮರ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಅವರ ಅಭಿವೃದ್ಧಿಗೆ ಹೆಚ್ಚು ಹೆಚ್ಚು ಕಾರ್ಯಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.
ಕೊನೆಗೆ ಅಸಾದುದ್ಧೀನ್ ಓವೈಸಿ ಅವರು, ಭಾರತ ತೀವ್ರ ನೋವಿನಲ್ಲಿದೆ ಎಂದು ತಮ್ಮ ಭಾಷಣ ಮುಗಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…