ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಐಎಂಐಎಂನ ಅಧ್ಯಕ್ಷ ಹಾಗೂ ಸಂಸದ ಅಸಾದುದ್ಧೀನ್ ಓವೈಸಿ ಆರೋಪಿಸಿದ್ದಾರೆ.
ಈ ಬಗ್ಗೆ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಬಗ್ಗೆ ಮಾತನಾಡಿದ ಅವರು, ಮುಸ್ಲಿಮರನ್ನು ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.
ದೇಶದಲ್ಲಿ ಮುಸ್ಲಿಮರು ಕಡು ಬಡವರಾಗಿದ್ದು, ಮುಸ್ಲಿಂ ಸಮುದಾಯದ ಮಹಿಳೆಯರು ಕೂಡ ಸಾಕಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದರೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಹಿಂದಿನಿಂದಲೂ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನವಂತೂ ಹೆಚ್ಚಳ ಕಂಡಿಲ್ಲ. ಹಜ್ ಸಮಿತಿಯು ಭ್ರಷ್ಟಾಚಾರ ಕೇಂದ್ರವಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಇನ್ನಾದರೂ ಮುಸ್ಲಿಮರ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚು ಕಾಳಜಿ ವಹಿಸಬೇಕು. ಅವರ ಅಭಿವೃದ್ಧಿಗೆ ಹೆಚ್ಚು ಹೆಚ್ಚು ಕಾರ್ಯಗಳನ್ನು ರೂಪಿಸಬೇಕು ಎಂದು ಆಗ್ರಹಿಸಿದರು.
ಕೊನೆಗೆ ಅಸಾದುದ್ಧೀನ್ ಓವೈಸಿ ಅವರು, ಭಾರತ ತೀವ್ರ ನೋವಿನಲ್ಲಿದೆ ಎಂದು ತಮ್ಮ ಭಾಷಣ ಮುಗಿಸಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…