ದೇಶ- ವಿದೇಶ

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ ಚಲನಚಿತ್ರ ದಿಗ್ಗಜ ಪ್ರೊಸೆನ್‌ಜಿತ್ ಚಟರ್ಜಿ ಮತ್ತು ನಟ ಆರ್ ಮಾಧವನ್ ಅವರು 2026 ರ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಭಾರತೀಯ ಚಿತ್ರರಂಗಕ್ಕೆ ನೀಡಿದ ಅಸಾಧಾರಣ ಕೊಡುಗೆಗಾಗಿ ಧರ್ಮೇಂದ್ರ ಸಿಂಗ್ ಡಿಯೋಲ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪದ್ಮಭೂಷಣ
1990 ಮತ್ತು 2000 ರ ದಶಕದ ಆರಂಭದಲ್ಲಿ ಹಿಂದಿ ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದ ಅಲ್ಕಾ ಯಾಗ್ನಿಕ್ ಅವರು ಅತ್ಯುತ್ತಮ ಗೌರವಕ್ಕೆ ಪಾತ್ರರಾಗಿದ್ದಾರೆ. ಮಲಯಾಳಂ ಚಿತ್ರರಂಗವನ್ನು ರಾಷ್ಟ್ರೀಯ ಮತ್ತು ಜಾಗತಿಕ ವೇದಿಕೆಗಳಲ್ಲಿ ಉನ್ನತೀಕರಿಸಿದ ನಟ ಮಮ್ಮುಟ್ಟಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಬಂಗಾಳಿ ಚಿತ್ರರಂಗದ ನಟ ಪ್ರೊಸೆನ್‌ಜಿತ್ ಚಟರ್ಜಿ, ನಟ ಆರ್.ಮಾಧವನ್ ಅವರು ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾಧವನ್‌ ಅವರು ಹಿಂದಿ, ತಮಿಳು ಮತ್ತು ಅಂತರರಾಷ್ಟ್ರೀಯ ಸಿನಿಮಾಗಳಲ್ಲಿ ಅವರ ಬಹುಮುಖ ಪ್ರತಿಭೆಯಾಗಿ ಹೆಸರು   ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

5 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

56 mins ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

1 hour ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

2 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

8 hours ago