ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ ಚಲನಚಿತ್ರ ದಿಗ್ಗಜ ಪ್ರೊಸೆನ್ಜಿತ್ ಚಟರ್ಜಿ ಮತ್ತು ನಟ ಆರ್ ಮಾಧವನ್ ಅವರು 2026 ರ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಭಾರತೀಯ ಚಿತ್ರರಂಗಕ್ಕೆ ನೀಡಿದ ಅಸಾಧಾರಣ ಕೊಡುಗೆಗಾಗಿ ಧರ್ಮೇಂದ್ರ ಸಿಂಗ್ ಡಿಯೋಲ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪದ್ಮಭೂಷಣ
1990 ಮತ್ತು 2000 ರ ದಶಕದ ಆರಂಭದಲ್ಲಿ ಹಿಂದಿ ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದ ಅಲ್ಕಾ ಯಾಗ್ನಿಕ್ ಅವರು ಅತ್ಯುತ್ತಮ ಗೌರವಕ್ಕೆ ಪಾತ್ರರಾಗಿದ್ದಾರೆ. ಮಲಯಾಳಂ ಚಿತ್ರರಂಗವನ್ನು ರಾಷ್ಟ್ರೀಯ ಮತ್ತು ಜಾಗತಿಕ ವೇದಿಕೆಗಳಲ್ಲಿ ಉನ್ನತೀಕರಿಸಿದ ನಟ ಮಮ್ಮುಟ್ಟಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಬಂಗಾಳಿ ಚಿತ್ರರಂಗದ ನಟ ಪ್ರೊಸೆನ್ಜಿತ್ ಚಟರ್ಜಿ, ನಟ ಆರ್.ಮಾಧವನ್ ಅವರು ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾಧವನ್ ಅವರು ಹಿಂದಿ, ತಮಿಳು ಮತ್ತು ಅಂತರರಾಷ್ಟ್ರೀಯ ಸಿನಿಮಾಗಳಲ್ಲಿ ಅವರ ಬಹುಮುಖ ಪ್ರತಿಭೆಯಾಗಿ ಹೆಸರು ಮಾಡಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…