Mysore
18
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಮೊಗಿಲಯ್ಯ ವಿಧಿವಶ

ಹೈದರಾಬಾದ್:‌ ಟಾಲಿವುಡ್‌ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಕಿನ್ನೇರ ಮೊಗಿಲಯ್ಯ ಎಂದು ಕರೆಯಲ್ಪಡುವ ಮೊಗಿಲಯ್ಯ ಅವರು ವಾರಂಗಲ್ಯ ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಪಿಂಡದ ಕಾಯಿಕೆಗೆ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಿನ್ನೇರಾ ಎಂದು ಕರೆಯಲ್ಪಡುವ ತಂತಿ ಬುಡಕಟ್ಟು ಸಂಗೀತ ವಾದ್ಯದ ಕೆಲವೇ ಕೊನೆಯ ವಾದಕರಲ್ಲಿ ಮೊಗಿಲಯ್ಯ ಒಬ್ಬರಾಗಿದ್ದರು. ಅವರಿಗೆ 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

 

Tags:
error: Content is protected !!