ದೇಶ- ವಿದೇಶ

ಪಹಲ್ಗಾಮ್‌ ದಾಳಿಗೆ ಭದ್ರತಾ ಲೋಪ ಕಾರಣ: ಸಂಸದೆ ಪ್ರಿಯಾಂಕಾ ಗಾಂಧಿ

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡಿದ್ದಾರೆ.

ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ ಒಂದು ವಿಷಯ ನನಗೆ ಬೇಸರ ತರಿಸಿದೆ ಎಂದರು. ರಕ್ಷಣಾ ಸಚಿವರು ಎಲ್ಲದರ ಬಗ್ಗೆ ಮಾತನಾಡಿದರು. ದೇಶದ ಬಗ್ಗೆಯೂ ಮಾತನಾಡಿದರು. ಇತಿಹಾಸದ ಬಗ್ಗೆಯೂ ಪಾಠ ಹೇಳಿದರು. ಆದರೆ ಪಹಲ್ಗಾಮ್‌ ದಾಳಿ ಹೇಗೆ ಮತ್ತು ಏಕೆ ನಡೆಯುತು ಎಂಬುದನ್ನು ಹೇಳಲಿಲ್ಲ ಎಂದು ಹೇಳಿದರು.

ಜನರು ಸರ್ಕಾರವನ್ನು ನಂಬಿ ಪಹಲ್ಗಾಮ್‌ಗೆ ಹೋಗಿದ್ದರು. ಸರ್ಕಾರ ಅವರನ್ನು ದೇವರ ಕರುಣೆಗೆ ಬಿಟ್ಟಿತು. ಈ ದಾಳಿ ನಡೆಯಲು ಯಾರು ಹೊಣೆ? ನಾಗರಿಕರ ಸುರಕ್ಷತೆಯು ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಅದು ಗೃಹ ಸಚಿವರ ಜವಾಬ್ದಾರಿಯಲ್ಲವೇ ಎಂದು ಸರ್ಕಾರವನ್ನು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

3 hours ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

3 hours ago

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…

3 hours ago

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…

3 hours ago

ಜಯಪುರ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆ

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…

3 hours ago

ಮೂಲಸೌಲಭ್ಯ ವಂಚಿತ ಯಳಂದೂರು ಸಂತೆ ಮೈದಾನ

ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…

3 hours ago