ದೇಶ- ವಿದೇಶ

ಪಹಲ್ಗಾಮ್‌ ದಾಳಿಗೆ ಭದ್ರತಾ ಲೋಪ ಕಾರಣ: ಸಂಸದೆ ಪ್ರಿಯಾಂಕಾ ಗಾಂಧಿ

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿಂದು ಪಹಲ್ಗಾಮ್‌ ದಾಳಿ ಬಗ್ಗೆ ಮಾತನಾಡಿದ್ದಾರೆ.

ದೇಶದ ಸೈನಿಕರು ಮತ್ತು ಸೇನೆಯ ಶೌರ್ಯಕ್ಕೆ ನಮಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕೇಳಿದ ಪ್ರಿಯಾಂಕಾ ಗಾಂಧಿ ಅವರು, ರಕ್ಷಣಾ ಸಚಿವರ ಭಾಷಣದಲ್ಲಿ ಒಂದು ವಿಷಯ ನನಗೆ ಬೇಸರ ತರಿಸಿದೆ ಎಂದರು. ರಕ್ಷಣಾ ಸಚಿವರು ಎಲ್ಲದರ ಬಗ್ಗೆ ಮಾತನಾಡಿದರು. ದೇಶದ ಬಗ್ಗೆಯೂ ಮಾತನಾಡಿದರು. ಇತಿಹಾಸದ ಬಗ್ಗೆಯೂ ಪಾಠ ಹೇಳಿದರು. ಆದರೆ ಪಹಲ್ಗಾಮ್‌ ದಾಳಿ ಹೇಗೆ ಮತ್ತು ಏಕೆ ನಡೆಯುತು ಎಂಬುದನ್ನು ಹೇಳಲಿಲ್ಲ ಎಂದು ಹೇಳಿದರು.

ಜನರು ಸರ್ಕಾರವನ್ನು ನಂಬಿ ಪಹಲ್ಗಾಮ್‌ಗೆ ಹೋಗಿದ್ದರು. ಸರ್ಕಾರ ಅವರನ್ನು ದೇವರ ಕರುಣೆಗೆ ಬಿಟ್ಟಿತು. ಈ ದಾಳಿ ನಡೆಯಲು ಯಾರು ಹೊಣೆ? ನಾಗರಿಕರ ಸುರಕ್ಷತೆಯು ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಅದು ಗೃಹ ಸಚಿವರ ಜವಾಬ್ದಾರಿಯಲ್ಲವೇ ಎಂದು ಸರ್ಕಾರವನ್ನು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…

27 mins ago

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

3 hours ago

ಮಳೆ ಕೊರತೆ, ಬಿಸಿಲಿಗೆ ಕಬಿನಿ ನೀರಿನ ಮಟ್ಟ ಕುಸಿತ

ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…

3 hours ago

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

4 hours ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

15 hours ago