ದೇಶ- ವಿದೇಶ

Pahalgam terrorist attack; ಸಂಭಾವ್ಯ ದಾಳಿ : ಭಾರತ ಸೇನೆ ಹೈ ಅಲರ್ಟ್

ಹೊಸದಿಲ್ಲಿ : ಪಹಲ್ಗಾಮ್‍ನ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಯಾವುದೇ ಸಂದರ್ಭದಲ್ಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಸೇನಾ ಪಡೆಯನ್ನು ಹೈಅಲರ್ಟ್‍ನಲ್ಲಿ ಇಡಲಾಗಿದೆ.

ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಬೇಕೆಂದು ಮೂರು ಸೇನಾ ಪಡೆಗಳ ಮುಖ್ಯಸ್ಥರಿಗೆ ರಕ್ಷಣಾ ಇಲಾಖೆ ಮೌಖಿಕ ಸೂಚನೆ ಕೊಟ್ಟಿದೆ.

ಪಾಕಿಸ್ತಾನದಿಂದ ಸಂಭಾವ್ಯ ದಾಳಿ ನಡೆಯಬಹುದೆಂಬ ಗುಪ್ತಚರ ವಿಭಾಗ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಸೇನಾಪಡೆಗಳನ್ನು ಕಟ್ಟೆಚ್ಚರದಲ್ಲಿ ಇಡಲಾಗಿದೆ.

ಭಾರತೀಯ ವಾಯುಸೇನೆ ದೇಶದ ಎಲ್ಲಾ ಕರಾವಳಿ ತೀರಪ್ರದೇಶಗಳಲ್ಲೂ ಸಮರ ಅಭ್ಯಾಸವನ್ನು ನಡೆಸುತ್ತಿದೆ. ಗುಜರಾತ್, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಕರ್ನಾಟಕ, ಗೋವಾ ಸೇರಿದಂತೆ ಕರಾವಳಿ ತೀರಪ್ರದೇಶಗಳಲ್ಲಿ ಭಾರತೀಯ ಸೇನಾಪಡೆಗೆ ಸೇರಿದ ವಾಯುಸೇನೆಯು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ವಸನ್ನದ್ಧವಾಗಿದೆ.

ಕಳೆದ ಎರಡು ದಿನಗಳಿಂದ ವಾಯುಸೇನೆಯು ನಿರಂತರವಾಗಿ ಸಮರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಇದೇ ರೀತಿ ಭಾರತೀಯ ನೌಕಾ ಪಡೆಯು ಕೂಡ ಸಮರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ.

ವಿಶೇಷವಾಗಿ ಮುಂಬೈ, ಕೊಚ್ಚಿ, ಕಾರವಾರ, ಪಣಜಿ ಮತ್ತಿತರ ಕಡೆ ಸಮರಾಭ್ಯಾಸ ನಡೆಸುತ್ತಿವೆ. ಪೂರ್ವ, ಪಶ್ಚಿಮ ಸೇರಿದಂತೆ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿತೀರ ಪ್ರದೇಶಗಳಲ್ಲಿ ನೌಕಾ ನೆಲೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಪಾಕಿಸ್ತಾನವು ಕರಾಚಿ ಮತ್ತು ಗುಜರಾತ್ ಕಡೆಯಿಂದ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಶಂಕಿಸಿದೆ. ಹೀಗಾಗಿ ಈ ತೀರ ಪ್ರದೇಶಗಳಲ್ಲಿ ಗುರುವಾರದಿಂದಲೇ ಹೈಅಲರ್ಟ್ ಘೋಷಿಸಲಾಗಿದೆ.

ಇದೇ ರೀತಿ ಭಾರತೀಯ ವಾಯುಪಡೆಗೆ ಸೇರಿದ ಯುದ್ಧ ವಿಮಾನಗಳನ್ನು ಸಹ ಸನ್ನದ್ದದಲ್ಲಿ ಇಡಲಾಗಿದೆ. ಗುರುವಾರ ಪಾಕಿಸ್ತಾನದ ಕರಾಚಿಯ ಅರಬ್ಬಿ ಸಮುದ್ರದಲ್ಲಿ 480 ಕಿ.ಮೀ.ನಿಂದ 500 ಕಿ.ಮೀ ಗುರಿ ತಲುಪುವ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ನಡೆಸಲಾಗಿತ್ತು.

ಹೀಗಾಗಿ ವಾಯುಪಡೆಯ ಯುದ್ಧ ವಿಮಾನಗಳಾದ ತೇಜಸ್, ರಫೇಲ್, ಸುಖೋಯ್, ನೇತ್ರ, ಸಿ17 ಗ್ಲೋಬ್ ಮಾಸ್ಟರ್, ಸಿ295, ಎಸ್‍ಎಚ್748, ಪ್ರಚಂಡ್, ಡೆಸಾಲ್ಟ, ನಿಕೋಯ್, ಜಾಗ್ವಾರ್, ಬೋಯಿಂಗ್, ರುದ್ರ, ಚಿನೂಕ್, ಧ್ರುವ, ಹಾಕ್, ಕಿರಣ್ ಸೇರಿದಂತೆ ಬಹುತೇಕ ಎಲ್ಲಾ ಯುದ್ಧ ವಿಮಾನಗಳು ಸಜ್ಜುಗೊಂಡಿವೆ.

ಈಗಾಗಲೇ ಒಂದು ಸುತ್ತಿನ ಸಮರ ಅಭ್ಯಾಸವನ್ನು ನಡೆಸಿರುವ ಈ ಯುದ್ಧ ವಿಮಾನಗಳು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿವೆ.

ಪ್ರಸ್ತುತ ಭಾರತದಲ್ಲಿ 60 ವಾಯುಪಡೆ ನೆಲೆಗಳಿವೆ. ನವದೆಹಲಿ, ಶಿಲ್ಲಾಂಗ್, ಪ್ರಯಾಗ್‍ರಾಜ್, ತಿರುವನಂತಪುರಂ, ಗಾಂಧಿನಗರ, ಬೆಂಗಳೂರಿನ ಯಲಹಂಕ, ನಾಗ್ಪುರ್, ಹಿಂಡನ್ ಸೇರಿದಂತೆ 60 ಕೇಂದ್ರಗಳಲ್ಲೂ ಕೂಡ ಯುದ್ಧ ವಿಮಾನಗಳನ್ನು ಇರಿಸಲಾಗಿದೆ.

ಇವುಗಳನ್ನು ವೆಸ್ಟರ್ನ್ ಎ ಕಮಾಂಡ್, ಈಸ್ಟರ್ನ್ ಎ ಕಮಾಂಡ್, ಸೌಥರ್ನ್ ಎ ಕಮಾಂಡ್, ನಾಥರ್ನ್ ಎ ಕಮಾಂಡ್ ಹಾಗೂ ನೈರುತ್ಯ ವಿಭಾಗ ಎಂದು ವಿಂಗಡಿಸಲಾಗಿದೆ.

ಪಾಕಿಸ್ತಾನ ಪ್ರಚೋದನೆಕಾರಿಯಾಗಿ ದಾಳಿ ನಡೆಸಿದರೆ ಅದರ ಪ್ರತಿರೋಧವನ್ನು ಹಿಮೆಟ್ಟಿಸಿ ತಕ್ಕ ಪಾಠ ಕಲಿಸಬೇಕೆಂದು ಸೇನಾಪಡೆ ಮೌಖಿಕ ಸೂಚನೆಯನ್ನು ನೀಡಿದೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

2 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

2 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

2 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

2 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

2 hours ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

3 hours ago