ದೇಶ- ವಿದೇಶ

Pahalgam terrorist attack; ಸಂಭಾವ್ಯ ದಾಳಿ : ಭಾರತ ಸೇನೆ ಹೈ ಅಲರ್ಟ್

ಹೊಸದಿಲ್ಲಿ : ಪಹಲ್ಗಾಮ್‍ನ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು, ಯಾವುದೇ ಸಂದರ್ಭದಲ್ಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ಸೇನಾ ಪಡೆಯನ್ನು ಹೈಅಲರ್ಟ್‍ನಲ್ಲಿ ಇಡಲಾಗಿದೆ.

ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಬೇಕೆಂದು ಮೂರು ಸೇನಾ ಪಡೆಗಳ ಮುಖ್ಯಸ್ಥರಿಗೆ ರಕ್ಷಣಾ ಇಲಾಖೆ ಮೌಖಿಕ ಸೂಚನೆ ಕೊಟ್ಟಿದೆ.

ಪಾಕಿಸ್ತಾನದಿಂದ ಸಂಭಾವ್ಯ ದಾಳಿ ನಡೆಯಬಹುದೆಂಬ ಗುಪ್ತಚರ ವಿಭಾಗ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಸೇನಾಪಡೆಗಳನ್ನು ಕಟ್ಟೆಚ್ಚರದಲ್ಲಿ ಇಡಲಾಗಿದೆ.

ಭಾರತೀಯ ವಾಯುಸೇನೆ ದೇಶದ ಎಲ್ಲಾ ಕರಾವಳಿ ತೀರಪ್ರದೇಶಗಳಲ್ಲೂ ಸಮರ ಅಭ್ಯಾಸವನ್ನು ನಡೆಸುತ್ತಿದೆ. ಗುಜರಾತ್, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಕರ್ನಾಟಕ, ಗೋವಾ ಸೇರಿದಂತೆ ಕರಾವಳಿ ತೀರಪ್ರದೇಶಗಳಲ್ಲಿ ಭಾರತೀಯ ಸೇನಾಪಡೆಗೆ ಸೇರಿದ ವಾಯುಸೇನೆಯು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ವಸನ್ನದ್ಧವಾಗಿದೆ.

ಕಳೆದ ಎರಡು ದಿನಗಳಿಂದ ವಾಯುಸೇನೆಯು ನಿರಂತರವಾಗಿ ಸಮರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಇದೇ ರೀತಿ ಭಾರತೀಯ ನೌಕಾ ಪಡೆಯು ಕೂಡ ಸಮರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ.

ವಿಶೇಷವಾಗಿ ಮುಂಬೈ, ಕೊಚ್ಚಿ, ಕಾರವಾರ, ಪಣಜಿ ಮತ್ತಿತರ ಕಡೆ ಸಮರಾಭ್ಯಾಸ ನಡೆಸುತ್ತಿವೆ. ಪೂರ್ವ, ಪಶ್ಚಿಮ ಸೇರಿದಂತೆ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿತೀರ ಪ್ರದೇಶಗಳಲ್ಲಿ ನೌಕಾ ನೆಲೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಪಾಕಿಸ್ತಾನವು ಕರಾಚಿ ಮತ್ತು ಗುಜರಾತ್ ಕಡೆಯಿಂದ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಶಂಕಿಸಿದೆ. ಹೀಗಾಗಿ ಈ ತೀರ ಪ್ರದೇಶಗಳಲ್ಲಿ ಗುರುವಾರದಿಂದಲೇ ಹೈಅಲರ್ಟ್ ಘೋಷಿಸಲಾಗಿದೆ.

ಇದೇ ರೀತಿ ಭಾರತೀಯ ವಾಯುಪಡೆಗೆ ಸೇರಿದ ಯುದ್ಧ ವಿಮಾನಗಳನ್ನು ಸಹ ಸನ್ನದ್ದದಲ್ಲಿ ಇಡಲಾಗಿದೆ. ಗುರುವಾರ ಪಾಕಿಸ್ತಾನದ ಕರಾಚಿಯ ಅರಬ್ಬಿ ಸಮುದ್ರದಲ್ಲಿ 480 ಕಿ.ಮೀ.ನಿಂದ 500 ಕಿ.ಮೀ ಗುರಿ ತಲುಪುವ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ನಡೆಸಲಾಗಿತ್ತು.

ಹೀಗಾಗಿ ವಾಯುಪಡೆಯ ಯುದ್ಧ ವಿಮಾನಗಳಾದ ತೇಜಸ್, ರಫೇಲ್, ಸುಖೋಯ್, ನೇತ್ರ, ಸಿ17 ಗ್ಲೋಬ್ ಮಾಸ್ಟರ್, ಸಿ295, ಎಸ್‍ಎಚ್748, ಪ್ರಚಂಡ್, ಡೆಸಾಲ್ಟ, ನಿಕೋಯ್, ಜಾಗ್ವಾರ್, ಬೋಯಿಂಗ್, ರುದ್ರ, ಚಿನೂಕ್, ಧ್ರುವ, ಹಾಕ್, ಕಿರಣ್ ಸೇರಿದಂತೆ ಬಹುತೇಕ ಎಲ್ಲಾ ಯುದ್ಧ ವಿಮಾನಗಳು ಸಜ್ಜುಗೊಂಡಿವೆ.

ಈಗಾಗಲೇ ಒಂದು ಸುತ್ತಿನ ಸಮರ ಅಭ್ಯಾಸವನ್ನು ನಡೆಸಿರುವ ಈ ಯುದ್ಧ ವಿಮಾನಗಳು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿವೆ.

ಪ್ರಸ್ತುತ ಭಾರತದಲ್ಲಿ 60 ವಾಯುಪಡೆ ನೆಲೆಗಳಿವೆ. ನವದೆಹಲಿ, ಶಿಲ್ಲಾಂಗ್, ಪ್ರಯಾಗ್‍ರಾಜ್, ತಿರುವನಂತಪುರಂ, ಗಾಂಧಿನಗರ, ಬೆಂಗಳೂರಿನ ಯಲಹಂಕ, ನಾಗ್ಪುರ್, ಹಿಂಡನ್ ಸೇರಿದಂತೆ 60 ಕೇಂದ್ರಗಳಲ್ಲೂ ಕೂಡ ಯುದ್ಧ ವಿಮಾನಗಳನ್ನು ಇರಿಸಲಾಗಿದೆ.

ಇವುಗಳನ್ನು ವೆಸ್ಟರ್ನ್ ಎ ಕಮಾಂಡ್, ಈಸ್ಟರ್ನ್ ಎ ಕಮಾಂಡ್, ಸೌಥರ್ನ್ ಎ ಕಮಾಂಡ್, ನಾಥರ್ನ್ ಎ ಕಮಾಂಡ್ ಹಾಗೂ ನೈರುತ್ಯ ವಿಭಾಗ ಎಂದು ವಿಂಗಡಿಸಲಾಗಿದೆ.

ಪಾಕಿಸ್ತಾನ ಪ್ರಚೋದನೆಕಾರಿಯಾಗಿ ದಾಳಿ ನಡೆಸಿದರೆ ಅದರ ಪ್ರತಿರೋಧವನ್ನು ಹಿಮೆಟ್ಟಿಸಿ ತಕ್ಕ ಪಾಠ ಕಲಿಸಬೇಕೆಂದು ಸೇನಾಪಡೆ ಮೌಖಿಕ ಸೂಚನೆಯನ್ನು ನೀಡಿದೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

9 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

10 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

10 hours ago