Pahalgam terrorist attack NIA speeds up investigation
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ.
ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಗೃಹ ಸಚಿವಾಲಯದ ಭಯೋತ್ಪಾದನಾ ನಿಗ್ರಹ ಮತ್ತು ಪ್ರತಿ-ಆಮೂಲಾಗ್ರೀಕರಣ ವಿಭಾಗವು ತನಿಖೆಯನ್ನು ಎನ್ಐಗೆ ವಹಿಸಿದ್ದು, ಹೊಸ ಎಫ್ಐಆರ್ಅನ್ನು ದಾಖಲಿಸಿದೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ಐಎ, ಭಯೋತ್ಪಾದಕ ದಾಳಿಯಲ್ಲಿ ಬದುಕುಳಿದವರ ಹೇಳಿಕೆಗಳನ್ನು ದಾಖಲಿಸಿದೆ.
ಈ ನಡುವೆ ಗುಪ್ತಚರ ಸಂಸ್ಥೆಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ 14 ಸ್ಥಳೀಯ ಭಯೋತ್ಪಾದಕರ ಪಟ್ಟಿಯನ್ನು ಸಂಗ್ರಹಿಸುತ್ತಿದ್ದು, ಇದರ ನಡುವಲ್ಲೇ ಎನ್ಐಎ ತನಿಖೆ ಆರಂಭವಾಗಿದೆ.
ಈ ಉಗ್ರರು, ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಇ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆಂದು ತಿಳಿದುಬಂದಿದೆ.
ಪಟ್ಟಿಯಲ್ಲಿರುವ 14 ಮಂದಿ ಭಯೋತ್ಪಾದಕರು ದಕ್ಷಿಣ ಕಾಶ್ಮೀರದಾದ್ಯಂತ, ವಿಶೇಷವಾಗಿ ಅನಂತ್ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದಾರೆಂದು ಹೇಳಲಾಗುತ್ತಿದ್ದು, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಚುರುಕುಗಳಿಸಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…