Pahalgam terrorist attack NIA speeds up investigation
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ವಹಿಸಿದ್ದು, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ.
ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸಂಬಂಧಿಸಿದ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಗೃಹ ಸಚಿವಾಲಯದ ಭಯೋತ್ಪಾದನಾ ನಿಗ್ರಹ ಮತ್ತು ಪ್ರತಿ-ಆಮೂಲಾಗ್ರೀಕರಣ ವಿಭಾಗವು ತನಿಖೆಯನ್ನು ಎನ್ಐಗೆ ವಹಿಸಿದ್ದು, ಹೊಸ ಎಫ್ಐಆರ್ಅನ್ನು ದಾಖಲಿಸಿದೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ಐಎ, ಭಯೋತ್ಪಾದಕ ದಾಳಿಯಲ್ಲಿ ಬದುಕುಳಿದವರ ಹೇಳಿಕೆಗಳನ್ನು ದಾಖಲಿಸಿದೆ.
ಈ ನಡುವೆ ಗುಪ್ತಚರ ಸಂಸ್ಥೆಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ 14 ಸ್ಥಳೀಯ ಭಯೋತ್ಪಾದಕರ ಪಟ್ಟಿಯನ್ನು ಸಂಗ್ರಹಿಸುತ್ತಿದ್ದು, ಇದರ ನಡುವಲ್ಲೇ ಎನ್ಐಎ ತನಿಖೆ ಆರಂಭವಾಗಿದೆ.
ಈ ಉಗ್ರರು, ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್-ಇ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆಂದು ತಿಳಿದುಬಂದಿದೆ.
ಪಟ್ಟಿಯಲ್ಲಿರುವ 14 ಮಂದಿ ಭಯೋತ್ಪಾದಕರು ದಕ್ಷಿಣ ಕಾಶ್ಮೀರದಾದ್ಯಂತ, ವಿಶೇಷವಾಗಿ ಅನಂತ್ನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದಾರೆಂದು ಹೇಳಲಾಗುತ್ತಿದ್ದು, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಚುರುಕುಗಳಿಸಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…