ದೇಶ- ವಿದೇಶ

ಪಾಕ್-ಅಫ್ಗಾನಿಸ್ತಾನ ಸಂಘರ್ಷ : ಕಂದಹಾರ್‌ ಮೇಲೆ ಪಾಕ್‌ ವೈಮಾನಿಕ ದಾಳಿ, ಸಾವಿನ ಶಂಕೆ

ಕಾಬುಲ್ : ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಫ್ಗಾನಿಸ್ತಾನದ ಕಂದಹಾರ್ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಂಗಳವಾರ ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಅಫ್ಗಾನಿಸ್ತಾನದಲ್ಲಿ 12ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಬುಧವಾರ ಮಧ್ಯಾಹ್ನದ ವರದಿ ಪ್ರಕಾರ ಪಾಕಿಸ್ತಾನಿ ಸೇನೆಯು ಕನಿಷ್ಠ 40 ಮಂದಿ ಅಫ್ಗಾನಿಸ್ತಾನದ ತಾಲಿಬಾನ್ ದಾಳಿಕೋರರನ್ನು ಕೊಂದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:-2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆ, ರಕ್ಷಣೆ ; ತಾಯಿ ಹುಲಿ ಪತ್ತೆಗೆ ಮುಂದುವರಿದ ಕೂಂಬಿಂಗ್

ಪಾಕಿಸ್ತಾನದಲ್ಲಿ ದಾಳಿಗಳನ್ನು ಹೆಚ್ಚಿಸಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಪಾಕಿಸ್ತಾನ ಒತ್ತಾಯಿಸಿತ್ತು. ಅಫ್ಗಾನಿಸ್ತಾನದಿಂದಲೇ ಉಗ್ರರು ಕಾರ್ಯಾಚರಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿತ್ತು. ಅದಾದ ಬಳಿಕ ಈ ಬೆಳವಣಿಗೆ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

8 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

8 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

8 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

8 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

9 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

9 hours ago