ಕಾಬುಲ್ : ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಫ್ಗಾನಿಸ್ತಾನದ ಕಂದಹಾರ್ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.
ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಂಗಳವಾರ ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಅಫ್ಗಾನಿಸ್ತಾನದಲ್ಲಿ 12ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಬುಧವಾರ ಮಧ್ಯಾಹ್ನದ ವರದಿ ಪ್ರಕಾರ ಪಾಕಿಸ್ತಾನಿ ಸೇನೆಯು ಕನಿಷ್ಠ 40 ಮಂದಿ ಅಫ್ಗಾನಿಸ್ತಾನದ ತಾಲಿಬಾನ್ ದಾಳಿಕೋರರನ್ನು ಕೊಂದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:-2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆ, ರಕ್ಷಣೆ ; ತಾಯಿ ಹುಲಿ ಪತ್ತೆಗೆ ಮುಂದುವರಿದ ಕೂಂಬಿಂಗ್
ಪಾಕಿಸ್ತಾನದಲ್ಲಿ ದಾಳಿಗಳನ್ನು ಹೆಚ್ಚಿಸಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಪಾಕಿಸ್ತಾನ ಒತ್ತಾಯಿಸಿತ್ತು. ಅಫ್ಗಾನಿಸ್ತಾನದಿಂದಲೇ ಉಗ್ರರು ಕಾರ್ಯಾಚರಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿತ್ತು. ಅದಾದ ಬಳಿಕ ಈ ಬೆಳವಣಿಗೆ ನಡೆದಿದೆ.
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…