ಕಾಬುಲ್ : ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಫ್ಗಾನಿಸ್ತಾನದ ಕಂದಹಾರ್ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.
ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮಂಗಳವಾರ ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಅಫ್ಗಾನಿಸ್ತಾನದಲ್ಲಿ 12ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಬುಧವಾರ ಮಧ್ಯಾಹ್ನದ ವರದಿ ಪ್ರಕಾರ ಪಾಕಿಸ್ತಾನಿ ಸೇನೆಯು ಕನಿಷ್ಠ 40 ಮಂದಿ ಅಫ್ಗಾನಿಸ್ತಾನದ ತಾಲಿಬಾನ್ ದಾಳಿಕೋರರನ್ನು ಕೊಂದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:-2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆ, ರಕ್ಷಣೆ ; ತಾಯಿ ಹುಲಿ ಪತ್ತೆಗೆ ಮುಂದುವರಿದ ಕೂಂಬಿಂಗ್
ಪಾಕಿಸ್ತಾನದಲ್ಲಿ ದಾಳಿಗಳನ್ನು ಹೆಚ್ಚಿಸಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಪಾಕಿಸ್ತಾನ ಒತ್ತಾಯಿಸಿತ್ತು. ಅಫ್ಗಾನಿಸ್ತಾನದಿಂದಲೇ ಉಗ್ರರು ಕಾರ್ಯಾಚರಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿತ್ತು. ಅದಾದ ಬಳಿಕ ಈ ಬೆಳವಣಿಗೆ ನಡೆದಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…