ದೇಶ- ವಿದೇಶ

ಪಾಕ್ ಮಸೀದಿಯಲ್ಲಿ ಬಾಂಬ್ ಸ್ಛೋಟ : 17 ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಬಳಿ ಮಸೀದಿಯೊಂದರಲ್ಲಿ ಮಧ್ಯಾಹ್ನ 1.40ರ ಸುಮಾರಿಗೆ ಪ್ರಾರ್ಥನೆಯ ವೇಳೆ ಆತ್ಮಹತ್ಯಾ ದಾಳಿ ನಡೆದು, ದುರ್ಘಟನೆಯಲ್ಲಿ 17 ಜನ ಸಾವಿಗೀಡಾಗಿದ್ದು, 95 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಛೋಟದಲ್ಲಿ ಪೊಲೀಸರು, ಆರೋಗ್ಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳಿಗೆ ಹೆಚ್ಚು ಹಾನಿಯಾಗಿದೆ ಎಂದು ಮೂಲಗಳು ಹೇಳಿವೆ.
ಭೀಕರ ಸ್ಛೋಟದಿಂದ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದ್ದು, ಅದರ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಸ್ಛೋಟದಲ್ಲಿ 17 ಜನರು ಸಾವಿಗೀಡಾಗಿದ್ದು, 95 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಾಗಿ ಪೊಲೀಸರಿದ್ದರು ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ಗಾಯಾಳುಗಳನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಯಗೊಂಡವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪೇಶಾವರದ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸಂತ್ರಸ್ತರಿಗಾಗಿ ರಕ್ತದಾನ ಮಾಡುವಂತೆ ಆಸ್ಪತ್ರೆ ನಾಗರಿಕರಲ್ಲಿ ಮನವಿ ಮಾಡಿದೆ.

andolanait

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

43 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

53 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago