pakistan prime minister
ನವದೆಹಲಿ: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮೇ.10ರ ಮುಂಜಾನೆ ಆಪರೇಷನ್ ಸಿಂಧೂರ್ನ ಭಾಗವಾಗಿ ತಮ್ಮ ಪ್ರಮುಖ ವಾಯುನೆಲೆಗಳ ಮೇಲೆ ಭಾರತ ನಡೆಸಿದ ನಿಖರ ದಾಳಿಯನ್ನು ದೃಢಪಡಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಇದು ಇತ್ತೀಚಿನ ನಾಲ್ಕು ದಿನಗಳ ಉಲ್ಬಣದ ಬಗ್ಗೆ ಅವರು ಮಾತನಾಡುವ ಮೊದಲ ವಿಡಿಯೋ ಆಗಿದೆ. ಶುಕ್ರವಾರ ಪಾಕಿಸ್ತಾನ ಸ್ಮಾರಕದಲ್ಲಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಭಾರತೀಯ ಕಾರ್ಯಾಚರಣೆ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ತಮ್ಮನ್ನು ಬೆಳಗಿನ ಜಾವ 2.30ಕ್ಕೆ ಎಬ್ಬಿಸಿದರು ಎಂದು ಹೇಳಿದರು.
ಮುನೀರ್ ಅವರು ಬೆಳಗಿನ ಜಾವ 2.30ಕ್ಕೆ ನನಗೆ ವೈಯಕ್ತಿಕವಾಗಿ ಕರೆ ಮಾಡಿ ದಾಳಿಯ ಬಗ್ಗೆ ಮಾಹಿತಿ ನೀಡಿದರು. ಇದು ತೀವ್ರ ಕಳವಳದ ಕ್ಷಣವಾಗಿತ್ತು ಎಂದು ಷರೀಫ್ ಇಸ್ಲಾಮಾಬಾದ್ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿಯ ರಾಷ್ಟ್ರೀಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್ನಲ್ಲಿ ವಿಡಿಯೋವನ್ನು ಹಂಚಿಕೊಂಡು, ಈ ಘಟನೆಯನ್ನು ಆಪರೇಷನ್ ಸಿಂಧೂರ್ನ ಧೈರ್ಯ ಮತ್ತು ದಕ್ಷತೆಗೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…