pakistan prime minister
ನವದೆಹಲಿ: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮೇ.10ರ ಮುಂಜಾನೆ ಆಪರೇಷನ್ ಸಿಂಧೂರ್ನ ಭಾಗವಾಗಿ ತಮ್ಮ ಪ್ರಮುಖ ವಾಯುನೆಲೆಗಳ ಮೇಲೆ ಭಾರತ ನಡೆಸಿದ ನಿಖರ ದಾಳಿಯನ್ನು ದೃಢಪಡಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಇದು ಇತ್ತೀಚಿನ ನಾಲ್ಕು ದಿನಗಳ ಉಲ್ಬಣದ ಬಗ್ಗೆ ಅವರು ಮಾತನಾಡುವ ಮೊದಲ ವಿಡಿಯೋ ಆಗಿದೆ. ಶುಕ್ರವಾರ ಪಾಕಿಸ್ತಾನ ಸ್ಮಾರಕದಲ್ಲಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಭಾರತೀಯ ಕಾರ್ಯಾಚರಣೆ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ತಮ್ಮನ್ನು ಬೆಳಗಿನ ಜಾವ 2.30ಕ್ಕೆ ಎಬ್ಬಿಸಿದರು ಎಂದು ಹೇಳಿದರು.
ಮುನೀರ್ ಅವರು ಬೆಳಗಿನ ಜಾವ 2.30ಕ್ಕೆ ನನಗೆ ವೈಯಕ್ತಿಕವಾಗಿ ಕರೆ ಮಾಡಿ ದಾಳಿಯ ಬಗ್ಗೆ ಮಾಹಿತಿ ನೀಡಿದರು. ಇದು ತೀವ್ರ ಕಳವಳದ ಕ್ಷಣವಾಗಿತ್ತು ಎಂದು ಷರೀಫ್ ಇಸ್ಲಾಮಾಬಾದ್ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿಯ ರಾಷ್ಟ್ರೀಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಎಕ್ಸ್ನಲ್ಲಿ ವಿಡಿಯೋವನ್ನು ಹಂಚಿಕೊಂಡು, ಈ ಘಟನೆಯನ್ನು ಆಪರೇಷನ್ ಸಿಂಧೂರ್ನ ಧೈರ್ಯ ಮತ್ತು ದಕ್ಷತೆಗೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…