ದೇಶ- ವಿದೇಶ

ಭಾರತದೊಂದಿಗೆ ಗೌರವಯುತ ಮಾತುಕತೆಗೆ ಸಿದ್ಧ : ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್‌

ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಬಾಕಿ ಇರುವ ಎಲ್ಲಾ ವಿಷಯಗಳ ಕುರಿತು ಭಾರತದೊಂದಿಗೆ ಘನತೆ ಮತ್ತು ಗೌರವಯುತ ರೀತಿಯಲ್ಲಿ ಸಂಯೋಜಿತ ಮಾತುಕತೆಗೆ ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ.

ತಮ್ಮ ದೇಶವು ಭಾರತದೊಂದಿಗೆ ಮಾತುಕತೆಗಾಗಿ ಬೇಡಿಕೊಳ್ಳುವುದಿಲ್ಲ ಎಂದು ಹೇಳಿದ್ದು, ಇಸ್ಲಾಮಾಬಾದ್ ಆಕ್ರಮಣಕ್ಕೆ ಸಂಪೂರ್ಣ ಬಲದಿಂದ ಪ್ರತಿಕ್ರಿಯಿಸಲು ಸಿದ್ಧವಾಗಿದೆ ಎಂದಿದ್ದಾರೆ.

ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶೀರದ ಮರಳುವಿಕೆ ಮತ್ತು ಭಯೋತ್ಪಾದನೆಯ ವಿಷಯದ ಬಗ್ಗೆ ಮಾತ್ರ ಮಾತುಕತೆ ನಡೆಸುವುದು ಪಾಕಿಸ್ತಾನದೊಂದಿಗಿನ ಮಾತುಕತೆಯ ಕುರಿತ ಭಾರತದ ನಿಲುವಾಗಿದೆ.
೨೦೦೩ರಲ್ಲಿ ಜನರಲ್ ಪರ್ವೇಜ್ ಮುಷರಫ್ ಆಳ್ವಿಕೆಯಲ್ಲಿ ಪ್ರಾರಂಭಿಸಲಾದ ಸಂಯೋಜಿತ ಸಂವಾದವು, ೨೦೦೮ ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ೧೬೬ ಜನರು ಸಾವನ್ನಪ್ಪಿದ ನಂತರ ನಿಂತುಹೋಗಿತ್ತು. ಈ ಸಂವಾದವು ಎಂಟು ಘಟಕಗಳನ್ನು ಹೊಂದಿದ್ದು, ಎರಡೂ ದೇಶಗಳ ನಡುವಿನ ಎಲ್ಲಾ ವಿವಾದಾತಕ ವಿಷಯಗಳನ್ನು ಒಳಗೊಂಡಿದೆ. ಪಾಕಿಸ್ತಾನದ ಉಪ ಪ್ರಧಾನ ಮಂತ್ರಿಯೂ ಆಗಿರುವ ಇಶಾಕ್ ದಾರ್, ಯಾವುದೇ ಆಕ್ರಮಣ ನಡೆದರೆ ಭಾರತಕ್ಕೆ ಸಂಪೂರ್ಣ ಬಲದಿಂದ ಪ್ರತೀಕಾರ ತೀರಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ.

ಏಪ್ರಿಲ್ ೨೨ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ೨೬ ಜನರು ಸಾವನ್ನಪ್ಪಿದ್ದಕ್ಕೆ ಪ್ರತಿಯಾಗಿ ಭಾರತ ಮೇ ೭ ರ ಮುಂಜಾನೆ ಆಪರೇಷನ್ ಸಿಂಧೂರ‍್ನಡಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರ ದಾಳಿ ನಡೆಸಿತ್ತು. ಪಿಒಜೆಕೆ ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಒಂಬತ್ತು ಸ್ಥಳಗಳಲ್ಲಿ ಈ ದಾಳಿಗಳು ನಡೆದಿದ್ದು, ನೂರಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ.

ಸಂಘರ್ಷದ ಬಗ್ಗೆ ಮಾತನಾಡಿದ ದಾರ್, ಪಾಕಿಸ್ತಾನದ ನಿರೂಪಣೆಯನ್ನು ಜಾಗತಿಕ ಮಟ್ಟದಲ್ಲಿ ಪೂರ್ವಭಾವಿ ರಾಜತಾಂತ್ರಿಕತೆಯ ಮೂಲಕ ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ.

ಭಾರತದೊಂದಿಗಿನ ಸಂಘರ್ಷದಲ್ಲಿ ಪಾಕಿಸ್ತಾನಿ ಪಡೆಗಳು ತಮ್ಮ ಪರಾಕ್ರಮವನ್ನು ಪ್ರದರ್ಶಿಸಿವೆ. ಯಾವುದೇ ಪ್ರಚೋದನೆಗೆ ಸಂಪೂರ್ಣವಾಗಿ ಪ್ರತಿಕ್ರಿಯಿಸುವುದಾಗಿ ಎಚ್ಚರಿಸಿದೆ. ಸಮುದ್ರದ ಮೂಲಕವೂ ಸಹ ಯಾವುದೇ ಆಕ್ರಮಣ ನಡೆದರೆ ಭಾರತಕ್ಕೆ ಸಂಪೂರ್ಣ ಬಲದಿಂದ ಪ್ರತಿಕ್ರಿಯಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago