ಟೆಹರಾನ್: ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂಬ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಟರ್ಕಿಯ ನಂತರ ಷರೀಫ್ ಈಗ ಎರಡು ದಿನಗಳ ಭೇಟಿಗಾಗಿ ಇರಾನ್ಗೆ ಆಗಮಿಸಿರುವ ವೇಳೆ ಟೆಹರಾನ್ನಲ್ಲಿ ಮಾತನಾಡಿದ್ದಾರೆ. ಕಾಶ್ಮೀರ ಸಮಸ್ಯೆ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರ ಸಮಸ್ಯೆ ಮತ್ತು ನೀರಿನ ಸಮಸ್ಯೆ ಸೇರಿದಂತೆ ಎಲ್ಲಾ ವಿವಾದಗಳನ್ನು ಮಾತುಕತೆಗಳ ಮೂಲಕ ಪರಿಹರಿಸಲು ನಾವು ಬಯಸುತ್ತೇವೆ. ವ್ಯಾಪಾರ ಮತ್ತು ಭಯೋತ್ಪಾದನೆ ನಿಗ್ರಹದ ಬಗ್ಗೆ ನಮ ನೆರೆಹೊರೆಯವರೊಂದಿಗೆ ಮಾತನಾಡಲು ಸಹ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂಧೂರದ ಮೂಲಕ ನಡೆಸಿದ ಮಿಲಿಟರಿ ದಾಳಿ ಬಳಿಕ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಪ್ರಧಾನಿ ಮೋದಿ ಪಾಕಿಸ್ತಾನದೊಂದಿಗಿನ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಪಾಕ್ ಆಕ್ರಮಿತ ಕಾಶೀರ ನಮಗೆ ಮರಳಿಸುವವರೆಗೂ ನಾವು ಯಾವುದೇ ರೀತಿಯಲ್ಲಿಯೂ ಸಂಧಾನಕ್ಕೆ ಬರುವುದಿಲ್ಲ ಎಂದು ಸರ್ಕಾರ ಹೇಳಿತ್ತು.
ಭಯೋತ್ಪಾದನೆ ಮತ್ತು ಮಾತುಕತೆ ಒಂದೇ ಸಮಯದಲ್ಲಿ ನಡೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ವ್ಯಾಪಾರ ನಡೆಯಲು ಸಾಧ್ಯವಿಲ್ಲ. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಿಒಕೆ ಬಗ್ಗೆ ಮಾತ್ರ ಎಂದು ನಾನು ಅಂತರರಾಷ್ಟ್ರೀಯ ಸಮುದಾಯಕ್ಕೆ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಇದೀಗ ಪಾಕಿಸ್ತಾನ ಪ್ರಧಾನಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ ಭಾರತದ ಜೊತೆಗೆ ಮಾತುಕತೆಗೆ ತಯಾರಿದ್ದೇವೆ ಎಂದು ಹೇಳಿದ್ದು, ನಾವು ಶಾಂತಿಯನ್ನು ಬಯಸುತ್ತೇವೆ ಎಂದಿದ್ದಾರೆ
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್ಪ್ರೆಸ್ ವಿಮಾನ ಫೈರ್ ಟ್ರಕ್ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…
ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…