ದೇಶ- ವಿದೇಶ

ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು: ಬಿಎಸ್‌ಎಫ್‌ ಯೋಧನನ್ನು ಬಿಟ್ಟು ಕಳಿಸಿದ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನವು ವಶಕ್ಕೆ ಪಡೆದಿದ್ದ ಬಿಎಸ್‌ಎಫ್‌ ಕಾನ್ಸ್‌ಸ್ಟೇಬಲ್‌ ಪೂರ್ಣಮ್‌ ಕುಮಾರ್‌ ಅವರನ್ನು ಇಂದು ಬಿಡುಗಡೆ ಮಾಡಿದೆ.

ಏಪ್ರಿಲ್.‌23ರಿಂದ ಪಾಕಿಸ್ತಾನದ ವಶದಲ್ಲಿದ್ದ ಬಿಎಸ್‌ಎಫ್‌ ಜವಾನ್‌ ಪೂರ್ಣಮ್‌ ಕುಮಾರ್‌ ಶಾ ಅವರನ್ನು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಅಮೃತಸರದ ಅಟ್ಟಾರಿಯ ಜಂಟಿ ಚೆಕ್‌ಪೋಸ್ಟ್‌ನಲ್ಲಿ ಅಧಿಕೃತವಾಗಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಇದನ್ನೂ ಓದಿ:- ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ

ಏಪ್ರಿಲ್.‌23ರಂದು ಪಂಜಾಬ್‌ನ್ ಫಿರೋಜ್‌ಪುರ ಜಿಲ್ಲೆಯ ಮಾಮ್‌ಡೋಟ್‌ ಸೆಕ್ಟರ್‌ನಲ್ಲಿ ಬಿಎಸ್‌ಎಫ್‌ನ 182ನೇ ಬೆಟಾಲಿಯನ್‌ ಕಾನ್ಸ್‌ಸ್ಟೇಬಲ್‌ ಪೂರ್ಣಮ್‌ ಕುಮಾರ್‌ ಶಾ ಅವರು ಗಡಿ ಸಮೀಪದ ರೈತರಿಗೆ ರಕ್ಷಣೆ ನೀಡುವ ಕಿಸಾನ್‌ ಗಾರ್ಡ್‌ ಕರ್ತವ್ಯದಲ್ಲಿದ್ದಾಗ ತಪ್ಪಾಗಿ ಪಾಕಿಸ್ತಾನದ ಗಡಿಗೆ ದಾಟಿದರು.

ಈ ವೇಳೆ ಪಾಕ್‌ ರೇಂಜರ್‌ಗಳು ಅವರನ್ನು ಬಂಧಿಸಿದ್ದರು. ನಿನ್ನೆ ತಾನೇ ಅಧಂಪುರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್‌ಗೆ ಖಡಕ್‌ ಎಚ್ಚರಿಕೆ ಕೊಟ್ಟ ಬೆನ್ನಲ್ಲೇ ಇಂದು ಯೋಧನನ್ನು ಬಿಡುಗಡೆಗೊಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago