Indus Waters Treaty
ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ.
ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿತ್ತು. ಇದರಿಂದ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ. ಕದನ ವಿರಾಮ ಘೋಷಣೆಯಾದರೂ ಪಾಕಿಸ್ತಾನ ಭಯೋತ್ಪಾದನೆಗೆ ನೀಡುವ ಬೆಂಬಲವನ್ನು ಪೂರ್ತಿಯಾಗಿ ನಿಲ್ಲಿಸುವವರೆಗೂ ಸಿಂಧೂ ಜಲ ಒಪ್ಪಂದ ರದ್ದಾಗಿರುತ್ತದೆ ಎಂದು ಭಾರತ ಖಚಿತಪಡಿಸಿದ್ದಕ್ಕೆ ಮೊದಲು ಪಾಕಿಸ್ತಾನ ಅಹಂಕಾರದ ಮಾತುಗಳನ್ನಾಡಿತ್ತು.
ಭಾರತ ಸಿಂಧೂ ಜಲ ಒಪ್ಪಂದ ಅಮಾನತ್ತನ್ನು ಕೈಬಿಡದಿದ್ದರೆ ಕದನವಿರಾಮಕ್ಕೆ ಯಾವುದೇ ಅರ್ಥವಿರುವುದಿಲ್ಲ. ನಮಗೆ ನೀರು ಬಿಡದಿದ್ದರೆ ಅದನ್ನು ಹೇಗೆ ಪಡೆಯಬೇಕೆಂಬುದು ನಮಗೆ ಗೊತ್ತಿದೆ ಎಂದು ಪಾಕ್ ಹೇಳಿಕೆ ನೀಡಿತ್ತು. ಅದಕ್ಕೂ ಭಾರತ ಜಗ್ಗದಿದ್ದಾಗ ಇದೀಗ ಮಾತುಕತೆಯ ಮೂಲಕ ಭಾರತದ ಮನವೊಲಿಸಲು ಮುಂದಾಗಿದೆ.
ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಭಾರತವು ಔಪಚಾರಿಕವಾಗಿ ತಿಳಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಸರ್ಕಾರದ ಪರವಾಗಿ ಭಾರತ ಆಕ್ಷೇಪಿಸುವ ನಿರ್ದಿಷ್ಟ ಷರತ್ತುಗಳನ್ನು ಚರ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿದೆ.
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…