ದೇಶ- ವಿದೇಶ

ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತು ಪರಿಶೀಲಿಸಿ: ಭಾರತಕ್ಕೆ ಪಾಕಿಸ್ತಾನ ಮನವಿ

ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ.

ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ ಒಪ್ಪಂದವನ್ನು ರದ್ದುಗೊಳಿಸಿತ್ತು. ಇದರಿಂದ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ. ಕದನ ವಿರಾಮ ಘೋಷಣೆಯಾದರೂ ಪಾಕಿಸ್ತಾನ ಭಯೋತ್ಪಾದನೆಗೆ ನೀಡುವ ಬೆಂಬಲವನ್ನು ಪೂರ್ತಿಯಾಗಿ ನಿಲ್ಲಿಸುವವರೆಗೂ ಸಿಂಧೂ ಜಲ ಒಪ್ಪಂದ ರದ್ದಾಗಿರುತ್ತದೆ ಎಂದು ಭಾರತ ಖಚಿತಪಡಿಸಿದ್ದಕ್ಕೆ ಮೊದಲು ಪಾಕಿಸ್ತಾನ ಅಹಂಕಾರದ ಮಾತುಗಳನ್ನಾಡಿತ್ತು.

ಭಾರತ ಸಿಂಧೂ ಜಲ ಒಪ್ಪಂದ ಅಮಾನತ್ತನ್ನು ಕೈಬಿಡದಿದ್ದರೆ ಕದನವಿರಾಮಕ್ಕೆ ಯಾವುದೇ ಅರ್ಥವಿರುವುದಿಲ್ಲ. ನಮಗೆ ನೀರು ಬಿಡದಿದ್ದರೆ ಅದನ್ನು ಹೇಗೆ ಪಡೆಯಬೇಕೆಂಬುದು ನಮಗೆ ಗೊತ್ತಿದೆ ಎಂದು ಪಾಕ್ ಹೇಳಿಕೆ ನೀಡಿತ್ತು. ಅದಕ್ಕೂ ಭಾರತ ಜಗ್ಗದಿದ್ದಾಗ ಇದೀಗ ಮಾತುಕತೆಯ ಮೂಲಕ ಭಾರತದ ಮನವೊಲಿಸಲು ಮುಂದಾಗಿದೆ.

ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಕೇಂದ್ರ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಭಾರತವು ಔಪಚಾರಿಕವಾಗಿ ತಿಳಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರು ತಮ್ಮ ಸರ್ಕಾರದ ಪರವಾಗಿ ಭಾರತ ಆಕ್ಷೇಪಿಸುವ ನಿರ್ದಿಷ್ಟ ಷರತ್ತುಗಳನ್ನು ಚರ್ಚಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago