ದೇಶ- ವಿದೇಶ

ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಪಾಕ್‌ಗೆ ಭೇಟಿ

ಇಸ್ಲಾಮಾಬಾದ್‌: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪಾಕ್ ಪ್ರಧಾನಿ ಶಹಬಾಜ್‌ ಷರೀಫ್‌ ಅಥವಾ ಅಲ್ಲಿನ ವಿದೇಶಾಂಗ ಸಚಿವರೊಂದಿಗೆ ಯಾವುದೇ ಕಾರಣಕ್ಕೂ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ. ಆದರೆ ಪ್ರಧಾನಿ ಷರೀಫ್‌ ಅವರು ಹಮ್ಮಿಕೊಂಡ ಔತಣಕೂಟದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದ್ದಾರೆ. ‌

ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ವಿವಾದಗಳು ದ್ವೀಪಕ್ಷೀಯವಾಗಿರುವ ಕಾರಣ ಈ ಬಗ್ಗೆ ಪಾಕ್‌ನೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಲಾಗಿದೆ. ಆದರೆ, ಭಾರತ, ರಷ್ಯಾ, ಪಾಕಿಸ್ತಾನ, ಚೀನಾ, ಇರಾನ್‌ ಹಾಗೂ ಮಧ್ಯ ಏಷ್ಯಾದ 4 ದೇಶಗಳು ಸದಸ್ಯರಾಗಿರುವ ಕಾರಣ ಈ ಒಕ್ಕೂಟಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ಮಾತ್ರ ಪಾಕ್‌ಗೆ ತೆರಳಿ ಭಾಷಣ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

4 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

28 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

39 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

3 hours ago