ಇಸ್ಲಾಮಾಬಾದ್: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅಥವಾ ಅಲ್ಲಿನ ವಿದೇಶಾಂಗ ಸಚಿವರೊಂದಿಗೆ ಯಾವುದೇ ಕಾರಣಕ್ಕೂ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ. ಆದರೆ ಪ್ರಧಾನಿ ಷರೀಫ್ ಅವರು ಹಮ್ಮಿಕೊಂಡ ಔತಣಕೂಟದಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದ್ದಾರೆ.
ಶೃಂಗಸಭೆಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ವಿವಾದಗಳು ದ್ವೀಪಕ್ಷೀಯವಾಗಿರುವ ಕಾರಣ ಈ ಬಗ್ಗೆ ಪಾಕ್ನೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಲಾಗಿದೆ. ಆದರೆ, ಭಾರತ, ರಷ್ಯಾ, ಪಾಕಿಸ್ತಾನ, ಚೀನಾ, ಇರಾನ್ ಹಾಗೂ ಮಧ್ಯ ಏಷ್ಯಾದ 4 ದೇಶಗಳು ಸದಸ್ಯರಾಗಿರುವ ಕಾರಣ ಈ ಒಕ್ಕೂಟಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ಮಾತ್ರ ಪಾಕ್ಗೆ ತೆರಳಿ ಭಾಷಣ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…