ಇಸ್ಲಾಮಾಬಾದ್: ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದು, ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ ಪಾಕಿಸ್ತಾನದ ಶಸ್ತ್ರಾಗಾರವನ್ನು “ಭಾರತಕ್ಕಾಗಿ ಮಾತ್ರ” ಇಡಲಾಗಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾನೆ.
ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಮೂಲಕ ಭಾರತ ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ಧೈರ್ಯ ಮಾಡಿದರೆ, ಅದು “ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು”. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಪ್ರದರ್ಶನಕ್ಕೆ ಅಲ್ಲ, ಮತ್ತು ಅವುಗಳ ಸ್ಥಳಗಳು ದೇಶಾದ್ಯಂತ ಅಡಗಿಕೊಂಡಿವೆ, ಪ್ರಚೋದಿಸಿದರೆ ದಾಳಿ ಮಾಡಲು ಸಿದ್ಧವಾಗಿವೆ ಎಂದು ಘೋಷಿಸಿದ್ದಾನೆ.
ಅವರು ನಮಗೆ ನೀರು ಸರಬರಾಜು ಮಾಡುವುದನ್ನು ನಿಲ್ಲಿಸಿದರೆ, ಅವರು ಯುದ್ಧಕ್ಕೆ ಸಿದ್ಧರಾಗಿರಬೇಕು. ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ನಮ್ಮಲ್ಲಿರುವ ಕ್ಷಿಪಣಿಗಳು, ಅವು ಪ್ರದರ್ಶನಕ್ಕೆ ಅಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆಂದು ಯಾರಿಗೂ ತಿಳಿದಿಲ್ಲ. ನಾನು ಮತ್ತೊಮ್ಮೆ ಹೇಳುತ್ತೇನೆ, ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಇವೆಲ್ಲವೂ ನಿಮ್ಮ ಮೇಲೆ ಗುರಿಯಾಗಿವೆ” ಎಂದು ಅಬ್ಬರಿಸಿಕೊಂಡಿದ್ದಾನೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…