ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಖ್ಯಾತ ಪಾಡ್ಕ್ಯಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ, ಪಾಕ್ ವಿಭಜನೆ ಮತ್ತು ನಂತರದ ರಕ್ತಪಾತದ ವಿಚಾರವನ್ನು ಹಂಚಿಕೊಂಡಿದ್ದಾರೆ.
ಪಾಕಿಸ್ತಾನ ಯಾವಾಗಲೂ ಭಾರತದೊಂದಿಗೆ ಭಿನ್ನಾಭಿಪ್ರಾಯ ಹೊಂದಲು ನಿರ್ಧರಿಸಿತು. ನಮ್ಮ ವಿರುದ್ಧ ಪರೋಕ್ಷ ಯುದ್ಧವನ್ನು ನಡೆಸಿದ್ದಾರೆ. ಒಂದು ರೀತಿಯಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಮನಸ್ಥಿತಿ ಪಾಕಿಸ್ತಾನದಲ್ಲಿ ಆಳವಾಗಿ ಬೇರೂರಿದೆ. ಇದು ಭಾರತಕ್ಕೆ ಮಾತ್ರವಲ್ಲ. ಜಗತ್ತಿನ ಭಯೋತ್ಪಾದನೆಯ ಕೇಂದ್ರಬಿಂದು ಪಾಕಿಸ್ತಾನ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಾಕಿಸ್ತಾನದ ಜನರು ಸಹ ಶಾಂತಿಯನ್ನು ಬಯಸುತ್ತಿದ್ದಾರೆ ಎಂದು ನಾನು ನಂಬುತ್ತೇನೆ. ಯಾಕೆಂದರೆ ಮಕ್ಕಳನ್ನು ಕೊಲ್ಲುವ ಮತ್ತು ಲೆಕ್ಕವಿಲ್ಲದಷ್ಟು ಜೀವಗಳನ್ನು ನಾಶಮಾಡುವ ನಿರಂತರ ಭಯೋತ್ಪಾದನೆಯಿಂದ ಅವರು ಬೇಸತ್ತಿದ್ದಾರೆ. ಭವಿಷ್ಯದಲ್ಲಿ ಅವರು ಶಾಂತಿಯ ಮಾರ್ಗವನ್ನು ಆರಿಸಿಕೊಳ್ಳಬಹುದು ಎಂದು ತಿಳಿಸಿದರು.
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…