ದೇಶ- ವಿದೇಶ

ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ.

ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ ಕಾಯ್ದೆಗೆ ಕೆಲವೊಂದು ತಿದ್ದಪಡಿ ಮಾಡಿದೆ. ಅಲ್ಲದೇ ಹೊಸ ಕರಡು ವರದಿಯನ್ನು ಶುಕ್ರವಾರ(ಜ.4) ಬಿಡುಗಡೆ ಮಾಡಿದೆ.

ಇನ್ನು ಈ ಮಹತ್ವದ ನಿರ್ಧಾರದ ಬಗ್ಗೆ ಜನರು ಅಭಿಪ್ರಾಯಗಳನ್ನು ತಿಳಿಸಲು ಫೆಬ್ರವರಿ.18 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹವಾಗುವ ಅಭಿಪ್ರಾಯಗಳನ್ನು ಆಧರಿಸಿದ ಬಳಿಕ ಅಂತಿಮ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ನಂತರ ಈ ಕರಡು ವರದಿ ಅನ್ವಯ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರಯಬೇಕಾದರೆ ಪೋಷಕರ ಅನುಮತಿ ಕಡ್ಡಾಯವಾಗಿದೆ. ಅದರೊಂದಿಗೆ ಕಂಪೆನಿಗಳು ತಮ್ಮ ದಾಖಲೆಗಳನ್ನು ಅಳಿಸುವಂತೆ ಹಾಗೂ ದಾಖಲೆಗಳನ್ನು ಯಾಕೆ ಕಲೆ ಹಾಕುತ್ತಿದ್ದೀರಿ ಎಂದು ಮಾಹಿತಿ ಪಡೆಯುವ ಹಾಗೂ ಖಾಸಗಿ ಮಾಹಿತಿ ರಕ್ಷಣೆ ಮಾಡಿಕೊಳ್ಳುವ ಅಧಿಕಾರ ಬಳಕೆದಾರನಿಗೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದು ವೇಳೆ ಕಂಪೆನಿಗಳು ಬಳಕೆದಾರನ ಡಾಟಾವನ್ನು ಲೀಕ್‌ ಮಾಡಿದ್ದಲ್ಲಿ, ಆಯಾಯ ಕಂಪೆನಿಗಳಿಗೆ 250 ರೂ. ದಂಡ ಹಾಕುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ.

ಅರ್ಚನ ಎಸ್‌ ಎಸ್

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

8 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

32 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

51 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

1 hour ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago