ದೇಶ- ವಿದೇಶ

ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರದ ನೀತಿಯೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ.

ಈ ನೀತಿಗೆ ಕೇಂದ್ರ ಸರ್ಕಾರ 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡು ಡಿಜಿಟಲ್‌ ಖಾಸಗಿ ಮಾಹಿತಿ ರಕ್ಷಣಾ ಕಾಯ್ದೆಗೆ ಕೆಲವೊಂದು ತಿದ್ದಪಡಿ ಮಾಡಿದೆ. ಅಲ್ಲದೇ ಹೊಸ ಕರಡು ವರದಿಯನ್ನು ಶುಕ್ರವಾರ(ಜ.4) ಬಿಡುಗಡೆ ಮಾಡಿದೆ.

ಇನ್ನು ಈ ಮಹತ್ವದ ನಿರ್ಧಾರದ ಬಗ್ಗೆ ಜನರು ಅಭಿಪ್ರಾಯಗಳನ್ನು ತಿಳಿಸಲು ಫೆಬ್ರವರಿ.18 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹವಾಗುವ ಅಭಿಪ್ರಾಯಗಳನ್ನು ಆಧರಿಸಿದ ಬಳಿಕ ಅಂತಿಮ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ನಂತರ ಈ ಕರಡು ವರದಿ ಅನ್ವಯ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರಯಬೇಕಾದರೆ ಪೋಷಕರ ಅನುಮತಿ ಕಡ್ಡಾಯವಾಗಿದೆ. ಅದರೊಂದಿಗೆ ಕಂಪೆನಿಗಳು ತಮ್ಮ ದಾಖಲೆಗಳನ್ನು ಅಳಿಸುವಂತೆ ಹಾಗೂ ದಾಖಲೆಗಳನ್ನು ಯಾಕೆ ಕಲೆ ಹಾಕುತ್ತಿದ್ದೀರಿ ಎಂದು ಮಾಹಿತಿ ಪಡೆಯುವ ಹಾಗೂ ಖಾಸಗಿ ಮಾಹಿತಿ ರಕ್ಷಣೆ ಮಾಡಿಕೊಳ್ಳುವ ಅಧಿಕಾರ ಬಳಕೆದಾರನಿಗೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಂದು ವೇಳೆ ಕಂಪೆನಿಗಳು ಬಳಕೆದಾರನ ಡಾಟಾವನ್ನು ಲೀಕ್‌ ಮಾಡಿದ್ದಲ್ಲಿ, ಆಯಾಯ ಕಂಪೆನಿಗಳಿಗೆ 250 ರೂ. ದಂಡ ಹಾಕುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ.

ಅರ್ಚನ ಎಸ್‌ ಎಸ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

52 mins ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

1 hour ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

1 hour ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

3 hours ago