ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮವನ್ನು ನಡೆಸಿದರು.
ಈ ವೇಳೆ ತಮ್ಮ ಶಾಲಾ ದಿನಗಳ ತಮಾಷೆಯ ಕಥೆಯನ್ನು ಹೇಳಿ, ಮಕ್ಕಳಿಗೆ ಗಣಿತವನ್ನು ನಿಭಾಯಿಸುವ ತಂತ್ರಗಳನ್ನು ಸಹ ಮೋದಿ ಕಲಿಸಿಕೊಟ್ಟರು.
ಪರೀಕ್ಷೆಯೇ ಜೀವನ ಎಂದು ಹೇಳಿದ ಪ್ರಧಾನಿ ಮೋದಿ ಅವರು, ಈ ಭಾವನೆಯೊಂದಿಗೆ ನಾವು ಬದುಕಲು ಸಾಧ್ಯವಿಲ್ಲ. ಮಕ್ಕಳ ಬೆಳವಣಿಗೆಗಾಗಿ ಅವರನ್ನು ಹೊರಗೆ ಕರೆದುಕೊಂಡು ಹೋಗುವುದು ಮುಖ್ಯ. ಅವರನ್ನು ಪುಸ್ತಕಗಳ ಸೆರೆಮನೆಯಲ್ಲಿ ಬಂಧಿಸಬಾರದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತ್ರಿಪುರಾದ ವಿದ್ಯಾರ್ಥಿಯನ್ನು ನೋಡಿದ ಪ್ರಧಾನಿ ಮೋದಿ ಅವರು, ನೀವು ಇಲ್ಲಿಗೆ ಹೇಗೆ ಬಂದಿರಿ ಎಂದು ಕೇಳಿದರು. ಇಲ್ಲಿಗೆ ಬರಲು ಲಂಚ ಏನಾದರೂ ನೀಡಿದಿರಾ ಎಂದು ತಮಾಷೆಯಾಗಿ ಕೇಳಿದರು. ಇದಕ್ಕೆ ಉತ್ತರಿಸಿದ ವಿದ್ಯಾರ್ಥಿಯು ತ್ರಿಪುರಾದಲ್ಲಿ ಲಂಚ ಕೆಲಸ ಮಾಡುವುದಿಲ್ಲ ಎಂದು ಉತ್ತರಿಸಿದ್ದು ಅಚ್ಚರಿಯಾಗಿತ್ತು.
ಬಳಿಕ ಕಾರ್ಯಕ್ರಮದಲ್ಲಿ ಆಹಾರ ಪದ್ಧತಿ ಮತ್ತು ಫಿಟ್ನೆಸ್ ಬಗ್ಗೆ ಮಾತನಾಡಿದ ಅವರು, ರೈತರ ಉದಾಹರಣೆಗಳನ್ನು ನೀಡುವ ಮೂಲಕ ಆರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು. ಅಲ್ಲದೇ ಮಕ್ಕಳು ತಮ್ಮ ಆಹಾರವನ್ನು 32 ಬಾರಿ ಅಗಿಯಬೇಕು. ಏನು ತಿನ್ನಬೇಕು ಮತ್ತು ಯಾವಾಗ ತಿನ್ನಬೇಕು ಎಂಬುದನ್ನು ಸಹ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…