ದೇಶ- ವಿದೇಶ

ಸಂಸತ್‌ ಮುಂಗಾರು ಅಧಿವೇಶನ: ಮಂಗಳವಾರ ಕೈ ನಾಯಕರ ಸಭೆ ಕರೆದ ಸೋನಿಯಾ ಗಾಂಧಿ

ನವದೆಹಲಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್‌‍ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ಪ್ರಮುಖ ಸಿಪಿಪಿ ಸಭೆ ಕರೆದಿದ್ದಾರೆ.

ಈ ಸಭೆಯು ಹಲವಾರು ವಿಷಯಗಳ ಕುರಿತು ವಿರೋಧ ಪಕ್ಷಗಳು ಮತ್ತು ಸರ್ಕಾರದ ನಡುವೆ ಘರ್ಷಣೆಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಕೈಗೊಳ್ಳುವ ಚುನಾವಣಾ ಆಯೋಗದ ಕ್ರಮದ ಬಗ್ಗೆ ವಿರೋಧ ಪಕ್ಷಗಳು ಬಲವಾದ ಕಳವಳವನ್ನು ವ್ಯಕ್ತಪಡಿಸುವ ನಿರೀಕ್ಷೆಯಿದೆ.

ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರ್‌ ಮತ್ತು ಅದರ ನಂತರದ ರಾಜತಾಂತ್ರಿಕ ಸಂಪರ್ಕದ ಬಗ್ಗೆ ಚರ್ಚೆಗೆ ಕಾಂಗ್ರೆಸ್‌‍ ಒತ್ತಾಯಿಸುತ್ತಿದೆ. ಕಾಂಗ್ರೆಸ್‌‍ ಸಂಸದೀಯ ಕಾರ್ಯತಂತ್ರ ಗುಂಪಿನ ಸಭೆಯಲ್ಲಿ ಕಾಂಗ್ರೆಸ್‌‍ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಇತರರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಜನಪಥ್‌ ನಿವಾಸದಲ್ಲಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ.21ರಂದು ಪ್ರಾರಂಭವಾಗಿ ಆಗಸ್ಟ್‌.21ರವರೆಗೆ ನಡೆಯಲಿದೆ ಎಂದು ಸರ್ಕಾರ ಘೋಷಿಸಿದೆ.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

34 mins ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

1 hour ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

4 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

12 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

12 hours ago