ದೇಶ- ವಿದೇಶ

ಸಂಸತ್‌ ಭದ್ರತಾ ಲೋಪ ಪ್ರಕರಣ: ಮೈಸೂರಿನ ಮನೋರಂಜನ್‌ ಸಂಚುಕೋರ

ನವದೆಹಲಿ: 2023 ರ ಡಿಸೆಂಬರ್‌ 13 ರಂದು ಸಂಸತ್‌ನಲ್ಲಿ ನಡೆದ ಭದ್ರತಾ ಲೋಪ ಪ್ರಕರಣದ ಆರೋಪಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ಉಂಟು ಮಾಡಲು ಹಾಗೂ ಅಲ್ಪ ಸಮಯದಲ್ಲೇ ಜಾಗತಿಕ ಖ್ಯಾತಿ ಪಡೆಯಲು ಪ್ರಯತ್ನಿಸಿದ್ದರು ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣದಲ್ಲಿ ಮೈಸೂರಿನ ಡಿ.ಮನೋರಂಜನ್‌ ಪ್ರಕರಣದ ಪ್ರಮುಖ ಸಂಚುಕೋರ, ಉಳಿದವರಾದ ಲಲಿತ್‌ ಝಾ, ಅಮೋಲ್‌ ಶಿಂದೆ, ಮಹೇಶ್‌ ಕುಮಾವತ್‌, ಸಾಗರ ಶರ್ಮಾ ಮತ್ತು ನೀಲಂ ಆಜಾದ್‌ ಆರೋಪಿಗಳಾಗಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಪರಿಣಾಮಕಾರಿಯಾಗಿಲ್ಲ ಅದನ್ನು ಬದಲಾಯಿಸಬೇಕು ಎಂಬ ಸಂದೇಶವನ್ನು ರವಾನಿಸಲು ಬಯಸಿದ್ದ ಆರೋಪಿಗಳು ಇದಕ್ಕಾಗಿ ತಮ್ಮ ಸಂಚನ್ನು ಕಾರ್ಯಗತಗೊಳಿಸಲು ಸುಮಾರು ಎರಡು ವರ್ಷ ತಯಾರಿ ನಡೆಸಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಎಲ್ಲಾ ಆರೋಪಿಗಳು ಸಾಮಾಜಿಕ ಜಾಲಾತಾಣದ ಮೂಲಕ ಪರಿಚಯವಾಗಿದ್ದರು. ಹೀಗೆ ಪರಿಚಯವಾಗಿದ್ದ ಅವರು ತಮ್ಮ ಉದ್ದೇಶವನ್ನು ಕಾರ್ಯಗತಗೊಳಿಸುವ ಮೊದಲ ಸಭೆಯನ್ನು ಮೈಸೂರಿನಲ್ಲೇ ನಡೆಸಿದ್ದರು. ಬಳಿಕ, ಗುರುಗ್ರಾಮ ಮತ್ತು ದೆಹಲಿಗಳಲ್ಲಿ ಸಭೆ ನಡೆಸಿದ್ದರು ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಸಂಸತ್‌ ಮೇಲಿನ ದಾಳಿ ಪ್ರಕರಣದ 22ನೇ ವಾರ್ಷಿಕೋತ್ಸವದ ವೇಳೆ ಸಾಗರ್‌ ಶರ್ಮಾ ಮತ್ತು ಮನೋರಂಜನ್‌ ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಸದಸದೊಳಗೆ ಜಿಗಿದಿದ್ದರು. ಘೋಷಣೆಗಳನ್ನು ಕೂಗುತ್ತಾ ಸ್ಮೋಕ್‌ ಕ್ಯಾನ್‌ ಹಾರಿಸಿ ದಾಂದಲೆ ಎಬ್ಬಿಸಿದ್ದರು. ಅದೇ ಸಮಯದಲ್ಲಿ ಸಂಸತ್‌ ಭವನದ ಹೊರಗೆ ಅಮೋಲ್‌ ಶಿಂಧೆ ಮತ್ತು ನೀಲಂ ಆಜಾದ್‌ ಬಣ್ಣದ ಹೊಗೆ ಹಾರಿಸಿ ಘೋಷಣೆ ಕೂಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

9 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

9 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

10 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

11 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

13 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

15 hours ago