ನವದೆಹಲಿ: ಲೋಕಸಭೆಯ ನೂತನ ಸಂಸತ್ ಕಚೇರಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಮಧ್ಯೆ ವಿರೋಧ ಪಕ್ಷಗಳ ಸಂಸದರು ಧರಣಿ ಮಾಡಿ ಕೋಲಾಹಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಇಂದು ಲೋಕಸಭೆಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಗೌತಮ್ ಅದಾನಿ ಲಂಚ ವಿವಾದ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಲು ಮುಂದಾದರು. ಹೀಗಾಗಿ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ ಎಂದು ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಕರ್ ಘೋಷಿಸಿದರು.
ಈ ವೇಳೆ ಸಭಾಪತಿ ಓಂ ಬಿರ್ಲಾ ಅವರು ಸದನದಲ್ಲಿ ಅದಾನಿ ವಿವಾದ ಮತ್ತು ಸಂಭಾಲ್ನಲ್ಲಿ ಇತ್ತೀಚಿನ ಹಿಂಸಾಚಾರದ ಬಗ್ಗೆ ಚರ್ಚಿಸಲು ಬಯಸಿದ ಪ್ರತಿಪಕ್ಷದ ಸದಸ್ಯರನ್ನು ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡುವಂತೆ ಕೇಳಿದರು. ಆದರೆ, ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಕಾರಣ, ಈ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. ಬಳಿಕ ಮಧ್ಯಾಹ್ನದ ಅವಧಿಯಲ್ಲಿಯೂ ಪ್ರತಿಭಟನೆ ಹೆಚ್ಚಾದ ಬೆನ್ನಲ್ಲೇ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಿದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…