ನವದೆಹಲಿ: ಕೇಂದ್ರ ಸರ್ಕಾರ ವಿಮಾ ವಲಯದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದ ವಿಮಾ ತಿದ್ದುಪಡಿ ಮಸೂದೆಯನ್ನು ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಈ ಕುರಿತು ಕೇಂದ್ರ ಹಣಕಾಸು ಸೇವೆಗಳ ಇಲಾಖೆಯೂ ವಿಮಾ ತಿದ್ದುಪಡಿ ಕರಡು ಮಸೂದೆ ಬಗ್ಗೆ ಜನರಿಂದ ಅಭಿಪ್ರಾಯಪಡೆಯಲು ಡಿಸೆಂಬರ್ 10ರವರೆಗೆ ಆಹ್ವಾನಿಸಲಾಗಿದೆ. ಆದರೆ ಅದನ್ನು ವಿಮಾ ವಲಯದ ಪ್ರತಿನಿಧಿಗಳಿಂದ ಅಭಿಪ್ರಾಯ ಸ್ವೀಕರಿಸಿ ಪರಾಮರ್ಶೆ ನಡೆಸಿದ ನಂತರವೇ ಮಸೂದೆಯನ್ನು ಅಂತಿಮಗೊಳಿಸಲಾಗುವುದು. ಹೀಗಾಗಿ ಈ ಪ್ರಕ್ರಿಯೆಯನ್ನು ಚಳಿಗಾಲದ ಅಧಿವೇಶನದಲ್ಲಿ ಪೂರ್ಣಗೊಳಿಸಲು ಸಮಯದ ಅಭಾವವಿರುವುದರಿಂದ ವಿಮಾ ತಿದ್ದುಪಡಿ ಮಸೂದೆ ಮಂಡನೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇವೆ ಎಂದು ಮಾಹಿತಿ ಲಭ್ಯವಾಗಿದೆ.
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯವು ವಿಮಾ ಕಾಯ್ದೆ 1938ರ ಅನ್ವಯ ತಿದ್ದುಪಡಿ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾಪಿಸಿದ್ದು, ವಿಮಾ ಕಂಪನಿಗಳಲ್ಲಿ ಎಫ್ಡಿಐ ಹೂಡಿಕೆ, ಒಂದೇ ಕಂಪನಿಗೆ ಜೀವ ವಿಮೆ ಹಾಗೂ ಆರೋಗ್ಯ ಅಥವಾ ಸಾಮಾನ್ಯ ಸೌಲಭ್ಯ ನೀಡಲು ಸಂಯೋಜಿತ ಪರವಾಗಿ ವಿಮಾ ಮಸೂದೆ ತಿದ್ದುಪಡಿಯನ್ನು ಸಲ್ಲಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…