ನವದೆಹಲಿ: ಕೇಂದ್ರ ಸರ್ಕಾರ ವಿಮಾ ವಲಯದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲು ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದ ವಿಮಾ ತಿದ್ದುಪಡಿ ಮಸೂದೆಯನ್ನು ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಕಡಿಮೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಈ ಕುರಿತು ಕೇಂದ್ರ ಹಣಕಾಸು ಸೇವೆಗಳ ಇಲಾಖೆಯೂ ವಿಮಾ ತಿದ್ದುಪಡಿ ಕರಡು ಮಸೂದೆ ಬಗ್ಗೆ ಜನರಿಂದ ಅಭಿಪ್ರಾಯಪಡೆಯಲು ಡಿಸೆಂಬರ್ 10ರವರೆಗೆ ಆಹ್ವಾನಿಸಲಾಗಿದೆ. ಆದರೆ ಅದನ್ನು ವಿಮಾ ವಲಯದ ಪ್ರತಿನಿಧಿಗಳಿಂದ ಅಭಿಪ್ರಾಯ ಸ್ವೀಕರಿಸಿ ಪರಾಮರ್ಶೆ ನಡೆಸಿದ ನಂತರವೇ ಮಸೂದೆಯನ್ನು ಅಂತಿಮಗೊಳಿಸಲಾಗುವುದು. ಹೀಗಾಗಿ ಈ ಪ್ರಕ್ರಿಯೆಯನ್ನು ಚಳಿಗಾಲದ ಅಧಿವೇಶನದಲ್ಲಿ ಪೂರ್ಣಗೊಳಿಸಲು ಸಮಯದ ಅಭಾವವಿರುವುದರಿಂದ ವಿಮಾ ತಿದ್ದುಪಡಿ ಮಸೂದೆ ಮಂಡನೆಯನ್ನು ಬಜೆಟ್ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇವೆ ಎಂದು ಮಾಹಿತಿ ಲಭ್ಯವಾಗಿದೆ.
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯವು ವಿಮಾ ಕಾಯ್ದೆ 1938ರ ಅನ್ವಯ ತಿದ್ದುಪಡಿ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾಪಿಸಿದ್ದು, ವಿಮಾ ಕಂಪನಿಗಳಲ್ಲಿ ಎಫ್ಡಿಐ ಹೂಡಿಕೆ, ಒಂದೇ ಕಂಪನಿಗೆ ಜೀವ ವಿಮೆ ಹಾಗೂ ಆರೋಗ್ಯ ಅಥವಾ ಸಾಮಾನ್ಯ ಸೌಲಭ್ಯ ನೀಡಲು ಸಂಯೋಜಿತ ಪರವಾಗಿ ವಿಮಾ ಮಸೂದೆ ತಿದ್ದುಪಡಿಯನ್ನು ಸಲ್ಲಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…