ದೇಶ- ವಿದೇಶ

ಸಂಸತ್ ಚಳಿಗಾಲದ ಅಧಿವೇಶನ ಆರಂಭ : ಪ್ರತಿಭಟನೆ, ಗದ್ದಲ ; ಕಲಾಪ ಮುಂದೂಡಿಕೆ

ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಕೆಲಸದ ಒತ್ತಡದಿಂದಾಗಿ ಬೂತ್ ಮಟ್ಟದ ಅಧಿಕಾರಿಗಳ ಹೆಚ್ಚುತ್ತಿರುವ ಆತ್ಮಹತ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿ ಚುನಾವಣಾ ಆಯೋಗ ಪ್ರಾರಂಭಿಸಿರುವ ಈ ಎಸ್‌ಐಆರ್ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಇಂದು ಮಧ್ಯಾಹ್ನ ೨.೨೦ ರ ಸುಮಾರಿಗೆ ಲೋಕಸಭೆ ಕಲಾಪ ನಾಳೆಗೆ ಮುಂದೂಡಲ್ಪಡುವ ಮೊದಲು, ಬೆಳಗ್ಗೆ ಮತ್ತು ಮಧ್ಯಾಹ್ನದ ನಂತರ ಪ್ರಶ್ನೋತ್ತರ ಅವಽಯಲ್ಲಿ ಎರಡು ಬಾರಿ ಸದನವನ್ನು ಮುಂದೂಡಲಾಯಿತು.
ಹಲವಾರು ವಿರೋಧ ಪಕ್ಷದ ಸದಸ್ಯರು ಎಸ್‌ಐಆರ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಆದಾಗ್ಯೂ, ಗದ್ದಲದ ನಡುವೆಯೇ, ಮಣಿಪುರದಲ್ಲಿ ಜಿಎಸ್‌ಟಿ ಕಾನೂನಿಗೆ ತಿದ್ದುಪಡಿ ಜಾರಿಗೆ ತರುವ ಮಸೂದೆಯನ್ನು ಸಂಕ್ಷಿಪ್ತ ಚರ್ಚೆಯ ನಂತರ ಅಂಗೀಕರಿಸಲಾಯಿತು.

ಇದನ್ನೂ ಓದಿ:-ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಈ ವಿಷಯದ ಕುರಿತು ಸುಗ್ರೀವಾಜ್ಞೆಯನ್ನು ಬದಲಾಯಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಮಸೂದೆಯನ್ನು ಮಂಡಿಸಿದರು. ರಾಜ್ಯವು ರಾಷ್ಟ್ರಪತಿ ಆಳ್ವಿಕೆಯಲ್ಲಿದೆ, ಆದ್ದರಿಂದ ಸಂಸತ್ತು ಈ ಮಸೂದೆಯನ್ನು ಅಂಗೀಕರಿಸಲು ತನ್ನ ಅಽಕಾರವನ್ನು ಬಳಸುತ್ತಿದೆ ಎಂದು ಸೀತಾರಾಮನ್ ಅವರು ಹೇಳಿದರು.

ಶೂನ್ಯ ವೇಳೆಯ ೧೨ ನಿಮಿಷಗಳ ಅವಽಯಲ್ಲಿ, ಸೀತಾರಾಮನ್ ೨೦೨೫-೨೦೨೬ ರ ಅನುದಾನಕ್ಕಾಗಿ ಪೂರಕ ಬೇಡಿಕೆಗಳನ್ನು ಮಂಡಿಸುವುದರ ಜೊತೆಗೆ ಮೂರು ಮಸೂದೆಗಳನ್ನು ಮಂಡಿಸಿದರು. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸುವ ಎರಡು ಮಸೂದೆಗಳು ಮತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ಅನ್ನು ಪರಿಚಯಿಸಲಾಯಿತು. ಅವುಗಳೆಂದರೆ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, ೨೦೨೫ ಮತ್ತು ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, ೨೦೨೫, ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ನಂತರ ’ವೋಟ್ ಚೋರಿ’ ಘೋಷಣೆಗಳ ನಡುವೆ, ಸಭಾತ್ಯಾಗ ಮಾಡಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

8 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

9 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

9 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

9 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

10 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

10 hours ago