ದೇಶ- ವಿದೇಶ

ಸಂಸತ್ ಚಳಿಗಾಲದ ಅಧಿವೇಶನ ಆರಂಭ : ಪ್ರತಿಭಟನೆ, ಗದ್ದಲ ; ಕಲಾಪ ಮುಂದೂಡಿಕೆ

ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಕೆಲಸದ ಒತ್ತಡದಿಂದಾಗಿ ಬೂತ್ ಮಟ್ಟದ ಅಧಿಕಾರಿಗಳ ಹೆಚ್ಚುತ್ತಿರುವ ಆತ್ಮಹತ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿ ಚುನಾವಣಾ ಆಯೋಗ ಪ್ರಾರಂಭಿಸಿರುವ ಈ ಎಸ್‌ಐಆರ್ ಕುರಿತು ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಇಂದು ಮಧ್ಯಾಹ್ನ ೨.೨೦ ರ ಸುಮಾರಿಗೆ ಲೋಕಸಭೆ ಕಲಾಪ ನಾಳೆಗೆ ಮುಂದೂಡಲ್ಪಡುವ ಮೊದಲು, ಬೆಳಗ್ಗೆ ಮತ್ತು ಮಧ್ಯಾಹ್ನದ ನಂತರ ಪ್ರಶ್ನೋತ್ತರ ಅವಽಯಲ್ಲಿ ಎರಡು ಬಾರಿ ಸದನವನ್ನು ಮುಂದೂಡಲಾಯಿತು.
ಹಲವಾರು ವಿರೋಧ ಪಕ್ಷದ ಸದಸ್ಯರು ಎಸ್‌ಐಆರ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಆದಾಗ್ಯೂ, ಗದ್ದಲದ ನಡುವೆಯೇ, ಮಣಿಪುರದಲ್ಲಿ ಜಿಎಸ್‌ಟಿ ಕಾನೂನಿಗೆ ತಿದ್ದುಪಡಿ ಜಾರಿಗೆ ತರುವ ಮಸೂದೆಯನ್ನು ಸಂಕ್ಷಿಪ್ತ ಚರ್ಚೆಯ ನಂತರ ಅಂಗೀಕರಿಸಲಾಯಿತು.

ಇದನ್ನೂ ಓದಿ:-ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಈ ವಿಷಯದ ಕುರಿತು ಸುಗ್ರೀವಾಜ್ಞೆಯನ್ನು ಬದಲಾಯಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಮಸೂದೆಯನ್ನು ಮಂಡಿಸಿದರು. ರಾಜ್ಯವು ರಾಷ್ಟ್ರಪತಿ ಆಳ್ವಿಕೆಯಲ್ಲಿದೆ, ಆದ್ದರಿಂದ ಸಂಸತ್ತು ಈ ಮಸೂದೆಯನ್ನು ಅಂಗೀಕರಿಸಲು ತನ್ನ ಅಽಕಾರವನ್ನು ಬಳಸುತ್ತಿದೆ ಎಂದು ಸೀತಾರಾಮನ್ ಅವರು ಹೇಳಿದರು.

ಶೂನ್ಯ ವೇಳೆಯ ೧೨ ನಿಮಿಷಗಳ ಅವಽಯಲ್ಲಿ, ಸೀತಾರಾಮನ್ ೨೦೨೫-೨೦೨೬ ರ ಅನುದಾನಕ್ಕಾಗಿ ಪೂರಕ ಬೇಡಿಕೆಗಳನ್ನು ಮಂಡಿಸುವುದರ ಜೊತೆಗೆ ಮೂರು ಮಸೂದೆಗಳನ್ನು ಮಂಡಿಸಿದರು. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸುವ ಎರಡು ಮಸೂದೆಗಳು ಮತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ಅನ್ನು ಪರಿಚಯಿಸಲಾಯಿತು. ಅವುಗಳೆಂದರೆ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, ೨೦೨೫ ಮತ್ತು ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, ೨೦೨೫, ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ನಂತರ ’ವೋಟ್ ಚೋರಿ’ ಘೋಷಣೆಗಳ ನಡುವೆ, ಸಭಾತ್ಯಾಗ ಮಾಡಿದರು.

ಆಂದೋಲನ ಡೆಸ್ಕ್

Recent Posts

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

4 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

25 mins ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

1 hour ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…

2 hours ago

ಓದುಗರ ಪತ್ರ:  RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಿ

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…

2 hours ago