ನವದೆಹಲಿ: ನವೆಂಬರ್.25ರಿಂದ ಡಿಸೆಂಬರ್.20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.
ಇದರ ಅಂಗವಾಗಿ ನವೆಂಬರ್.24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್ ರಿಜಿಜು ಅವರು, ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆಯಲಾಗುವುದು. ಸಭೆಯಲ್ಲಿ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಒಮ್ಮತ ಮೂಡಿಸಲಾಗುತ್ತದೆ. ಇದು ಆಗಿನಿಂದಲೂ ನಡೆದುಬಂದಿರುವ ವಾಡಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಭಾನುವಾರ ನಡೆಯಲಿರುವ ಸಭೆಯಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಗಳನ್ನು ಮಂಡಿಸಲಿದ್ದು, ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಅಧಿವೇಶನದಲ್ಲಿ ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ಘಟನೆಗಳ ಬಗ್ಗೆ ವಿಪಕ್ಷಗಳು ಚರ್ಚೆ ನಡೆಸಲಿದ್ದು, ಆಡಳಿತ ಪಕ್ಷದ ವಿರುದ್ಧ ಮುಗಿಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…
ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು…
ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ…
ಮಂಡ್ಯ : ಆಹಾರದ ಮಹತ್ವ ಹೆಚ್ಚಿದೆ. ಎಲ್ಲರೂ ಆಹಾರದ ಮಹತ್ವದ ಕುರಿತು ತಿಳಿದುಕೊಳ್ಳಬೇಕು. 30-40 ವರ್ಷಗಳ ಹಿಂದೆ ಭಾರತ ಆಹಾರದ…