ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ

ನವದೆಹಲಿ: ನವೆಂಬರ್.‌25ರಿಂದ ಡಿಸೆಂಬರ್.‌20ರವರೆಗೆ ಸಂಸತ್‌ ಚಳಿಗಾಲದ ಅಧಿವೇಶನ ನಡೆಯಲಿದೆ.

ಇದರ ಅಂಗವಾಗಿ ನವೆಂಬರ್.‌24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ.

ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್‌ ರಿಜಿಜು ಅವರು, ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆಯಲಾಗುವುದು. ಸಭೆಯಲ್ಲಿ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಒಮ್ಮತ ಮೂಡಿಸಲಾಗುತ್ತದೆ. ಇದು ಆಗಿನಿಂದಲೂ ನಡೆದುಬಂದಿರುವ ವಾಡಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಭಾನುವಾರ ನಡೆಯಲಿರುವ ಸಭೆಯಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಗಳನ್ನು ಮಂಡಿಸಲಿದ್ದು, ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.  ಅಧಿವೇಶನದಲ್ಲಿ ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ಘಟನೆಗಳ ಬಗ್ಗೆ ವಿಪಕ್ಷಗಳು ಚರ್ಚೆ ನಡೆಸಲಿದ್ದು, ಆಡಳಿತ ಪಕ್ಷದ ವಿರುದ್ಧ ಮುಗಿಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

56 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

60 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago