ನವದೆಹಲಿ: ನವೆಂಬರ್.25ರಿಂದ ಡಿಸೆಂಬರ್.20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.
ಇದರ ಅಂಗವಾಗಿ ನವೆಂಬರ್.24ರ ಭಾನುವಾರದಂದು ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ಈ ಬಗ್ಗೆ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಸಚಿವ ಕಿರಣ್ ರಿಜಿಜು ಅವರು, ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆಯಲಾಗುವುದು. ಸಭೆಯಲ್ಲಿ ಸಮಸ್ಯೆಗಳನ್ನು ಕುರಿತು ಚರ್ಚಿಸಿ ಒಮ್ಮತ ಮೂಡಿಸಲಾಗುತ್ತದೆ. ಇದು ಆಗಿನಿಂದಲೂ ನಡೆದುಬಂದಿರುವ ವಾಡಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಭಾನುವಾರ ನಡೆಯಲಿರುವ ಸಭೆಯಲ್ಲಿ ಸರ್ಕಾರವು ತನ್ನ ಕಾರ್ಯಸೂಚಿಗಳನ್ನು ಮಂಡಿಸಲಿದ್ದು, ವಿವಿಧ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಅಧಿವೇಶನದಲ್ಲಿ ಮಣಿಪುರ ಹಿಂಸಾಚಾರ ಸೇರಿದಂತೆ ಹಲವು ಘಟನೆಗಳ ಬಗ್ಗೆ ವಿಪಕ್ಷಗಳು ಚರ್ಚೆ ನಡೆಸಲಿದ್ದು, ಆಡಳಿತ ಪಕ್ಷದ ವಿರುದ್ಧ ಮುಗಿಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…