ದೇಶ- ವಿದೇಶ

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಜನಗಣತಿಯ ಸಮಯದಲ್ಲಿ ಜನರು ಒದಗಿಸುವ ಎಲ್ಲಾ ಮಾಹಿತಿಯು ಸುರಕ್ಷಿತ ಮತ್ತು ಗೌಪ್ಯವಾಗಿರುತ್ತದೆ. ಎಲ್ಲಾ ನಾಗರಿಕರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ 2027 ರ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ತಮ್ಮ ಮಾಸಿಕ ರೇಡಿಯೋ ಭಾಷಣ ‘ಮನ್ ಕಿ ಬಾತ್’ ನಲ್ಲಿ ಮನವಿ ಮಾಡಿದರು.

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಜನಗಣತಿಯು ಮುಖ್ಯವಾದದ್ದು, ಈ ಅಭಿಯಾನದಲ್ಲಿ ಪ್ರತಿಯೊಬ್ಬ ಭಾರತೀಯರೂ ಇದರ ಬಗ್ಗೆ ತಿಳಿದಿರಬೇಕು. “2027 ರ ಜನಗಣತಿಯನ್ನು ಡಿಜಿಟಲ್ ಭದ್ರತೆಯ ಮೂಲಕ ಈ ಡೇಟಾವನ್ನು ರಕ್ಷಿಸಲಾಗುತ್ತದೆ. ಜನರ ಮನೆಗಳಿಗೆ ಭೇಟಿ ನೀಡುವ ಗಣತಿದಾರರಿಗೆ ಮೊಬೈಲ್ ಆ್ಯಪ್ ಅಳವಡಿಸಲಾಗಿದ್ದು, ಅವರು ಎಲ್ಲರೊಂದಿಗೆ ಮಾತನಾಡಿ ಅಲ್ಲಿಯೇ ಮಾಹಿತಿಯನ್ನು ನಮೂದಿಸುತ್ತಾರೆ ಎಂದು ಹೇಳಿದರು.

ಈ ಬಾರಿ ಸಾರ್ವಜನಿಕರಿಗೆ ಒಂದು ವಿಶೇಷ ಅವಕಾಶ ನೀಡಲಾಗಿದ್ದು, ನಾಗರಿಕರು ಸ್ವತಹ ಆನ್‌ಲೈನ್‌ ಮೂಲಕ ಮಾಹಿತಿ ನೀಡಬಹುದು ಎಂದು ಮೋದಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago