ದೇಶ- ವಿದೇಶ

ಪ್ಯಾಸೆಂಜರ್‌, ಗೂಡ್ಸ್‌ ರೈಲು ಪರಸ್ಪರ ಡಿಕ್ಕಿ : 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಹರಾಷ್ಟ್ರ: ದೇಶದಲ್ಲಿಂದು ಮತ್ತೊಂದು ರೈಲು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಪರಸ್ಪರ ಡಿಕ್ಕಿಯಾಗಿದ್ದು, ಈ ಹಿನ್ನೆಲೆ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಪ್ಯಾಸೆಂಜರ್‌ ರೈಲಿನ ಮೂರು ಬೋಗಿಗಳು ಹಳಿ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ 2.30ರ ವೇಳೆಗೆ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ಅಪಘಾತವಾಗಿದೆ. ಈ ಹಿನ್ನೆಲೆ ಪ್ರಯಾಣಿಕ ರೈಲಿನಲ್ಲಿದ್ದ 3 ಬೋಗಿಗಳು ಹಳಿ ತಪ್ಪಿದ್ದು, ಈ ಘಟನೆಯಲ್ಲಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಅದೃಷ್ಟವಶಾತ್‌ ಈ ಅಪಘಾತದಲ್ಲಿ ಯಾರೂ ಪ್ರಾಣ ಕಳೆದುಕೊಂಡಿಲ್ಲ ಎಂದು ತಿಳಿದುಬಂದಿದೆ.

ಹಳಿ ತಪ್ಪಿದ ಪ್ಯಾಸೆಂಜರ್‌ ರೈಲು ಛತ್ತೀಸ್‌ಗಢದ ಬಿಲಾಸ್ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ತೆರಳುತ್ತಿತ್ತು. ಇನ್ನು, ಸಿಗ್ನಲ್‌ ನೀಡುವಲ್ಲಿ ಉಂಟಾದ ಎಡವಟ್ಟಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರಯಾಣಿಕ ರೈಲಿನ ಲೋಕೋಪೈಲಟ್‌ ಎಮರ್ಜೆನ್ಸಿ ಬ್ರೇಕ್‌ ಅನ್ನು ಹಾಕಿದರೂ ಗೂಡ್ಸ್‌ ರೈಲಿನ ಜತೆ ಡಿಕ್ಕಿಯಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದೂ ಹೇಳಲಾಗಿದೆ. ಆದರೆ, ಬೆಳಗ್ಗಿನ ಜಾವ 4: 30 ರ ವೇಳೆಗೆ ಹಳಿ ತಪ್ಪಿದ ರೈಲಿನ ಬೋಗಿಗಳನ್ನು ಸರಿ ಪಡಿಸಲಾಗಿದೆ. ನಂತರ, ಅಪಘಾತ ನಡೆದ ಸ್ಥಳದಿಂದ ಬೆಳಗ್ಗೆ 5: 24 ರ ವೇಳೆಗೆ ಹೊರಟಿತು ಹಾಗೂ 5:44ಕ್ಕೆ ಗೋಂಡಿಯಾ ರೈಲು ನಿಲ್ದಾಣವನ್ನು ಅಪಘಾತಕ್ಕೊಳಗಾದ ಪ್ರಯಾಣಿಕ ರೈಲು ತೆರಳಿತು ಎಂದೂ ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಹಾಗೂ 5: 45 ರ ವೇಳೆಗೆ ಅಪ್‌ ಹಾಗೂ ಡೌನ್‌ ಟ್ರಾಫಿಕ್‌ ಪುನಾರಂಭವಾಯಿತು ಎಂದೂ ರೈಲ್ವೆ ಇಲಾಖೆ ತಿಳಿಸಿದೆ.

ಎಕ್ಸ್‌ಪ್ರೆಸ್‌ ರೈಲಿನ 4 ಟೈರ್‌ಗಳು ಟ್ರ್ಯಾಕ್‌ನಿಂದ ಹೊರಕ್ಕೆ ಬಂದು ಈ ಅಪಘಾತವಾಗಿದ್ದು, ಯಾವ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿಲ್ಲ ಎಂದೂ ರೈಲ್ವೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ರೈಲ್ವೆ ಸುರಕ್ಷತಾ ಆಯುಕ್ತ ಈ ಅಪಘಾತ ಸಂಬಂಧ ತನಿಖೆ ನಡೆಸಲಿದೆ ಎಂದೂ ಹೇಳಿದ್ದಾರೆ.

andolana

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

46 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago