ದೇಶ- ವಿದೇಶ

ಪ್ಯಾಸೆಂಜರ್‌, ಗೂಡ್ಸ್‌ ರೈಲು ಪರಸ್ಪರ ಡಿಕ್ಕಿ : 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಹರಾಷ್ಟ್ರ: ದೇಶದಲ್ಲಿಂದು ಮತ್ತೊಂದು ರೈಲು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ಪರಸ್ಪರ ಡಿಕ್ಕಿಯಾಗಿದ್ದು, ಈ ಹಿನ್ನೆಲೆ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಪ್ಯಾಸೆಂಜರ್‌ ರೈಲಿನ ಮೂರು ಬೋಗಿಗಳು ಹಳಿ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ 2.30ರ ವೇಳೆಗೆ ಪ್ಯಾಸೆಂಜರ್‌ ರೈಲು ಹಾಗೂ ಗೂಡ್ಸ್‌ ರೈಲು ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ಅಪಘಾತವಾಗಿದೆ. ಈ ಹಿನ್ನೆಲೆ ಪ್ರಯಾಣಿಕ ರೈಲಿನಲ್ಲಿದ್ದ 3 ಬೋಗಿಗಳು ಹಳಿ ತಪ್ಪಿದ್ದು, ಈ ಘಟನೆಯಲ್ಲಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಅದೃಷ್ಟವಶಾತ್‌ ಈ ಅಪಘಾತದಲ್ಲಿ ಯಾರೂ ಪ್ರಾಣ ಕಳೆದುಕೊಂಡಿಲ್ಲ ಎಂದು ತಿಳಿದುಬಂದಿದೆ.

ಹಳಿ ತಪ್ಪಿದ ಪ್ಯಾಸೆಂಜರ್‌ ರೈಲು ಛತ್ತೀಸ್‌ಗಢದ ಬಿಲಾಸ್ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ತೆರಳುತ್ತಿತ್ತು. ಇನ್ನು, ಸಿಗ್ನಲ್‌ ನೀಡುವಲ್ಲಿ ಉಂಟಾದ ಎಡವಟ್ಟಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರಯಾಣಿಕ ರೈಲಿನ ಲೋಕೋಪೈಲಟ್‌ ಎಮರ್ಜೆನ್ಸಿ ಬ್ರೇಕ್‌ ಅನ್ನು ಹಾಕಿದರೂ ಗೂಡ್ಸ್‌ ರೈಲಿನ ಜತೆ ಡಿಕ್ಕಿಯಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದೂ ಹೇಳಲಾಗಿದೆ. ಆದರೆ, ಬೆಳಗ್ಗಿನ ಜಾವ 4: 30 ರ ವೇಳೆಗೆ ಹಳಿ ತಪ್ಪಿದ ರೈಲಿನ ಬೋಗಿಗಳನ್ನು ಸರಿ ಪಡಿಸಲಾಗಿದೆ. ನಂತರ, ಅಪಘಾತ ನಡೆದ ಸ್ಥಳದಿಂದ ಬೆಳಗ್ಗೆ 5: 24 ರ ವೇಳೆಗೆ ಹೊರಟಿತು ಹಾಗೂ 5:44ಕ್ಕೆ ಗೋಂಡಿಯಾ ರೈಲು ನಿಲ್ದಾಣವನ್ನು ಅಪಘಾತಕ್ಕೊಳಗಾದ ಪ್ರಯಾಣಿಕ ರೈಲು ತೆರಳಿತು ಎಂದೂ ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಹಾಗೂ 5: 45 ರ ವೇಳೆಗೆ ಅಪ್‌ ಹಾಗೂ ಡೌನ್‌ ಟ್ರಾಫಿಕ್‌ ಪುನಾರಂಭವಾಯಿತು ಎಂದೂ ರೈಲ್ವೆ ಇಲಾಖೆ ತಿಳಿಸಿದೆ.

ಎಕ್ಸ್‌ಪ್ರೆಸ್‌ ರೈಲಿನ 4 ಟೈರ್‌ಗಳು ಟ್ರ್ಯಾಕ್‌ನಿಂದ ಹೊರಕ್ಕೆ ಬಂದು ಈ ಅಪಘಾತವಾಗಿದ್ದು, ಯಾವ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿಲ್ಲ ಎಂದೂ ರೈಲ್ವೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ರೈಲ್ವೆ ಸುರಕ್ಷತಾ ಆಯುಕ್ತ ಈ ಅಪಘಾತ ಸಂಬಂಧ ತನಿಖೆ ನಡೆಸಲಿದೆ ಎಂದೂ ಹೇಳಿದ್ದಾರೆ.

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

9 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

9 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 hours ago