ಮಹರಾಷ್ಟ್ರ: ದೇಶದಲ್ಲಿಂದು ಮತ್ತೊಂದು ರೈಲು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ಪರಸ್ಪರ ಡಿಕ್ಕಿಯಾಗಿದ್ದು, ಈ ಹಿನ್ನೆಲೆ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದ ಗೋಂಡಿಯಾದಲ್ಲಿ ಬುಧವಾರ ನಸುಕಿನ ಜಾವ 2.30ರ ವೇಳೆಗೆ ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ಅಪಘಾತವಾಗಿದೆ. ಈ ಹಿನ್ನೆಲೆ ಪ್ರಯಾಣಿಕ ರೈಲಿನಲ್ಲಿದ್ದ 3 ಬೋಗಿಗಳು ಹಳಿ ತಪ್ಪಿದ್ದು, ಈ ಘಟನೆಯಲ್ಲಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರೂ ಪ್ರಾಣ ಕಳೆದುಕೊಂಡಿಲ್ಲ ಎಂದು ತಿಳಿದುಬಂದಿದೆ.
ಹಳಿ ತಪ್ಪಿದ ಪ್ಯಾಸೆಂಜರ್ ರೈಲು ಛತ್ತೀಸ್ಗಢದ ಬಿಲಾಸ್ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ತೆರಳುತ್ತಿತ್ತು. ಇನ್ನು, ಸಿಗ್ನಲ್ ನೀಡುವಲ್ಲಿ ಉಂಟಾದ ಎಡವಟ್ಟಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರಯಾಣಿಕ ರೈಲಿನ ಲೋಕೋಪೈಲಟ್ ಎಮರ್ಜೆನ್ಸಿ ಬ್ರೇಕ್ ಅನ್ನು ಹಾಕಿದರೂ ಗೂಡ್ಸ್ ರೈಲಿನ ಜತೆ ಡಿಕ್ಕಿಯಾಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದೂ ಹೇಳಲಾಗಿದೆ. ಆದರೆ, ಬೆಳಗ್ಗಿನ ಜಾವ 4: 30 ರ ವೇಳೆಗೆ ಹಳಿ ತಪ್ಪಿದ ರೈಲಿನ ಬೋಗಿಗಳನ್ನು ಸರಿ ಪಡಿಸಲಾಗಿದೆ. ನಂತರ, ಅಪಘಾತ ನಡೆದ ಸ್ಥಳದಿಂದ ಬೆಳಗ್ಗೆ 5: 24 ರ ವೇಳೆಗೆ ಹೊರಟಿತು ಹಾಗೂ 5:44ಕ್ಕೆ ಗೋಂಡಿಯಾ ರೈಲು ನಿಲ್ದಾಣವನ್ನು ಅಪಘಾತಕ್ಕೊಳಗಾದ ಪ್ರಯಾಣಿಕ ರೈಲು ತೆರಳಿತು ಎಂದೂ ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಹಾಗೂ 5: 45 ರ ವೇಳೆಗೆ ಅಪ್ ಹಾಗೂ ಡೌನ್ ಟ್ರಾಫಿಕ್ ಪುನಾರಂಭವಾಯಿತು ಎಂದೂ ರೈಲ್ವೆ ಇಲಾಖೆ ತಿಳಿಸಿದೆ.
ಎಕ್ಸ್ಪ್ರೆಸ್ ರೈಲಿನ 4 ಟೈರ್ಗಳು ಟ್ರ್ಯಾಕ್ನಿಂದ ಹೊರಕ್ಕೆ ಬಂದು ಈ ಅಪಘಾತವಾಗಿದ್ದು, ಯಾವ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿಲ್ಲ ಎಂದೂ ರೈಲ್ವೆ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ರೈಲ್ವೆ ಸುರಕ್ಷತಾ ಆಯುಕ್ತ ಈ ಅಪಘಾತ ಸಂಬಂಧ ತನಿಖೆ ನಡೆಸಲಿದೆ ಎಂದೂ ಹೇಳಿದ್ದಾರೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…