ಹೊಸದಿಲ್ಲಿ: ಗ್ರಾಹಕರ ದಾರಿ ತಪ್ಪಿಸುವ ರೀತಿ ಜಾಹೀರಾತು ಪ್ರಕಟ ಮಾಡಿದ್ದ ಪತಂಜಲಿ ಸಂಸ್ಥೆ ವಿರುದ್ಧ ಹರಿಹಾಯ್ದಿರುವ ಸುಪ್ರೀಂಕೋರ್ಟ್ ಮಂಗಳವಾರ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್ದೇವ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ.
ಜನರ ದಾರಿ ತಪ್ಪಿಸುವ ಜಾಹೀರಾತು ಸಂಬಂಧ ಪತ್ರಿಕೆಗಳಲ್ಲಿ ಅದೇ ರೀತಿಯಲ್ಲೇ ಕ್ಷಮಾಪಣೆ ಕೇಳಿ ಎಂದು ಸುಪ್ರೀಕೋರ್ಟ್ ಪತಂಜಲಿ ಸಂಸ್ಥೆಗೆ ಸೂಚಿಸಿತ್ತು. ಆದೆರ ಪತಂಜಲಿ ಸಂಸ್ಥೆ ಸಣ್ಣ ಪೋಸ್ಟ್ ಕಾರ್ಡ್ ಸೈಜ್ನಲ್ಲಿ ಕ್ಷಮಾಪಣೆ ಕೇಳಿತ್ತು. ಇದು ಕೋರ್ಟ್ ಗಮನಕ್ಕೆ ಬರುತ್ತಿದ್ದಂತೆ ಗರಂ ಆದ ನ್ಯಾಯಧೀಶರು ನಿಮ್ಮ ಕಂಪನಿಯ ಉತ್ಪನ್ನಗಳ ಜಾಹೀರಾತಿನಂತೆ ಪೂರ್ಣ ಪುಟದಲ್ಲಿ ದೊಡ್ಡ ಅಕ್ಷರಗಳಲ್ಲಿ ಕ್ಷಮಾಪಣೆಯನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದಿಯೇ ಎಂದು ಖಾರವಾಗಿ ಪ್ರಶ್ನಿಸಿದರು.
ಕೇವಲ ಕಾಟಾಚಾರಕ್ಕೆ ಚಿಕ್ಕ ಅಕ್ಷರಗಳಲ್ಲಿ ಕ್ಷಮಾಪಣೆ ಜಾಹೀರಾತು ನೀಡಿದರೆ ಸಾಲದು, ಕ್ಷಮೆಯಾಚನೆ ದೊಡ್ಡ ಗಾತ್ರದಲ್ಲಿ ಇರಬೇಕು ಎಂದು ಪೀಠವು ಹೇಳಿತ್ತು. ಜಾಹೀರಾತು ಗಾತ್ರ ಪರಿಶೀಲಿಸಲು ಮುದ್ರಿತ ಕ್ಷಮೆಯಾಚನೆ ಪ್ರತಿಗಳನ್ನು ಕೋರ್ಟ್ಗೆ ಸಲ್ಲಿಸಬೇಕು ಎಂದು ಪೀಠವು ಪತಂಜಲಿ ಸಂಸ್ಥೆಗೆ ನಿರ್ದೇಶಿಸಿತು.
ಈ ಬೆನ್ನಲ್ಲೇ ಪತಂಜಲಿ ಸಂಸ್ಥೆ ಇಂದು(ಏ.24) ಪತ್ರಿಕೆಗಳಲ್ಲಿ ದೊಡ್ಡ ಗಾತ್ರದಲ್ಲೇ ಕ್ಷಮಾಪಣೆ ಕೇಳಿ ಸುಪ್ರೀಂಕೋರ್ಟ್ ಆದೇಶ ಪಾಲಿಸಿದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…